ಶಿವಮೊಗ್ಗ:
ಶಿವಮೊಗ್ಗದಲ್ಲಿ ನವೆಂಬರ್ 3 ರಂದು ನಡೆಯುವ ಲೋಕಸಭಾ ಉಪಚುನಾವಣೆ ಮೂಲಕ ಬಿಜೆಪಿಯ ದಕ್ಷಿಣ ಭಾರತದ ಬಾಗಿಲನ್ನು ಮುಚ್ಚಿಸುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು.
ಶಿವಮೊಗ್ಗದಲ್ಲಿ ಲೋಕಸಭಾ ಉಪಚುನಾವಣಾ ಪ್ರಚಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಧುಬಂಗಾರಪ್ಪ ಅವರ ಪರ ಮತ ಯಾಚಿಸಿ ಮಾತನಾಡುತ್ತಿದ್ದ ದೇವೇಗೌಡರು, ಎರಡೂ ಪಕ್ಷಗಳ ಮೈತ್ರಿ ಶಿವಮೊಗ್ಗದಿಂದಲೇ ಆರಂಭಗೊಳ್ಳಲಿದೆ. ಇದು 2019ರ ಚುನಾವಣೆಗೆ ದಿಕ್ಸೂಚಿ ಆಗಲಿದೆ.
ಪಶ್ಚಿಮ ಬಂಗಾಳ, ಗುಜರಾತ್, ಉತ್ತರ ಪ್ರದೇಶ ಹಾಗೂ ಹರಿಯಾಣ ಮೊದಲಾದ ಕಡೆ ಏನಾಗುತ್ತಿದೆ. ಕಾಶ್ಮೀರದಲ್ಲಿ ಐದು ವರ್ಷದಲ್ಲಿ ಏನಾಗಿದೆ? ಎಂದು ಪ್ರಶ್ನಿಸಿದ ಅವರು, ಕಳೆದ ನಾಲ್ಕೂವರೆ ವರ್ಷದಲ್ಲಿ ಬಿಜೆಪಿ ಆಡಳಿತದಲ್ಲಿ ಆಗಿರುವುದನ್ನು ಗಮನಿಸಿ ಎಲ್ಲಾ ಪ್ರಾದೇಶಿಕ ಪಕ್ಷಗಳ ಮುಖಂಡರು ಒಂದಾಗಿದ್ದಾರೆ. ಈ ದೇಶದಲ್ಲಿ ಶಾಂತಿ, ಸಹಬಾಳ್ವೆಯ ಅಗತ್ಯ ಇದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/pm-deve.gif)