ಹೈಕಮಾಂಡ್ ಗ್ರೀನ್ ಸಿಗ್ನಲ್ : ಇಂದೇ ಬಿಎಸ್ವೈ ಪ್ರಮಾಣವಚನ!!

ಬೆಂಗಳೂರು:

     ಕರ್ನಾಟಕದಲ್ಲಿ ನೂತನ ಸರ್ಕಾರ ರಚನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

      ಇಂದು ಬೆಳಗ್ಗೆ 9.15 ಕ್ಕೆ ಬಿಜೆಪಿ ರಾಷ್ಟ್ರಿಯ ಅಧ್ಯಕ್ಷ ಅಮಿತ್ ಷಾ ರವರು ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ‌ ಸೂಚಿಸದ್ದು, ಇಂದು ಸಂಜೆ 6.30 ರಿಂದ 7.30 ರ ಶುಭ ಲಗ್ನದಲ್ಲಿ ಪ್ರಮಾಣ ವಚನ ಯಡಿಯೂರಪ್ಪ ಅವರು ಪ್ರಮಾಣವಚನವನ್ನು ಸ್ವೀಕಾರ ಮಾಡುತ್ತಾರೆ ಎಂದು ತಿಳಿದುಬಂದಿದೆ.

      ಈ ಬಗ್ಗೆ ಬಿಎಸ್‍ವೈ ತಮ್ಮ ಧವಳಗಿರಿ ನಿವಾಸದಲ್ಲಿ ಮಾತನಾಡಿ ಮಾಹಿತಿ ನೀಡಿದ್ದು, ಬೆಳಿಗ್ಗೆ 10ಕ್ಕೆ ರಾಜ್ಯಪಾಲರನ್ನು ಭೇಟಿಯಾಗಿ,  ಇಂದೇ ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಮಾಡಿಕೊಡಿ  ಎಂದು ಕೋರುತ್ತೇನೆ. ಈಗಾಗಲೇ ನಾನು ವಿರೋಧ ಪಕ್ಷದ ನಾಯಕನಾಗಿರುವುದರಿಂದ ಮತ್ತೊಮ್ಮೆ ಶಾಸಕಾಂಗದ ಸಭೆ ಅಗತ್ಯವಿಲ್ಲ ಎಂದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link