ಯೇಸು ಪ್ರತಿಮೆ ವಿವಾದ : ಕನಕಪುರ ತಹಶೀಲ್ದಾರ್ ಎತ್ತಂಗಡಿ!!

ರಾಮನಗರ:

      ಕನಕಪುರ ತಹಶೀಲ್ದಾರ್ ಆನಂದಯ್ಯ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

       ಆನಂದಯ್ಯ ಅವರ ಬದಲಿಗೆ ಕನಕಪುರ ತಹಶೀಲ್ದಾರ್ ಆಗಿ ವರ್ಷಾ ಅವರನ್ನು ಆಯ್ಕೆ ಮಾಡಲಾಗಿದೆ. 

      ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆಗೆ ಡಿ.ಕೆ.ಶಿವಕುಮಾರ್ ಅವರು ಶಂಕು ಸ್ಥಾಪನೆ ಮಾಡಿದ ನಂತರ ಅದು ವಿವಾದಕ್ಕೆ ಕಾರಣವಾಗಿತ್ತು. ಕಪಾಲಿ ಬೆಟ್ಟ ಅಭಿವೃದ್ದಿ ಸಮಿತಿಗೆ ಮಂಜೂರಾಗಿದ್ದ 10 ಎಕರೆ ಜಾಗವನ್ನು ಯೇಸು ಪ್ರತಿಮೆಗೆ ಬಳಸಲಾಗಿದೆ ಎಂದು ವಿವಾದಕ್ಕೆ ಕಾರಣವಾಗಿತ್ತು. ಇದರ ಬಗ್ಗೆ ತನಿಖೆ ನಡೆಸುವಂತೆ ರಾಮನಗರ ಜಿಲ್ಲಾಧಿಕಾರಿಗೆ ಸೂಚಿಸಲಾಗಿತ್ತು.

       ಏಸು ಪ್ರತಿಮೆ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ವರದಿ ನೀಡುವ ಮೊದಲೇ ಕನಕಪುರ ತಹಸೀಲ್ದಾರ್ ವರ್ಗಾವಣೆ ಮಾಡಲಾಗಿದೆ. ದಿಢೀರ್ ವರ್ಗಾವಣೆ ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap