ಧಾರವಾಡ :
ಯೋಗೀಶ್ ಗೌಡ ಕೊಲೆ ಪ್ರಕಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟಿದ್ದಂತ ಮಾಜಿ ಸಚಿವ ವಿನಯ್ ಕುಲಕರ್ಣಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ಧಾರವಾಢದ 3ನೇ ಹೆಚ್ಚುವರಿ ಕೋರ್ಟ್ ಆದೇಶಿಸಿದೆ.
ಇಂದು ಸಿಬಿಐನಿಂದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿತ್ತು. ಹೀಗಾಗಿ ಅವರನ್ನು ಮತ್ತೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಧಾರವಾಡದ ಮೂರನೇ ಹೆಚ್ಚುವರಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು.
ಈ ಪ್ರಕರಣದ ಕುರಿತಂತೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸಿದಂತ ಧಾರವಾಡದ 3ನೇ ಹೆಚ್ಚುವರಿ ಕೋರ್ಟ್, ನವೆಂಬರ್ 23ರವರೆಗೆ 14 ದಿನಗಳ ಕಾಲ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/11/Vinay-kulakarni.gif)