ಧಾರವಾಡ: ಮದುವೆಗೆ ಆಮಂತ್ರಿಸಲು ಹೋಗಿದ್ದ ಮದುಮಗ ಸಾವು!!!

ಧಾರವಾಡ: 

     ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ.

      ಮಹಮ್ಮದ್ ಅಸ್ಲಾಂ ಶಹಾಪೂರ (24) ಅಪಘಾತದಲ್ಲಿ ಸಾವನ್ನಪ್ಪಿದ ಯುವಕ. ಸವದತ್ತಿಯಿಂದ ಧಾರವಾಡಕ್ಕೆ ಸಂಬಂಧಿಕರಿಗೆ ಮದುವೆ ಆಮಂತ್ರಣ ನೀಡಿ ವಾಪಸ್ಸಾಗುವ ಸಮಯ ಈ ದುರ್ಘಟನೆ ನಡೆದಿದೆ. ಅಮ್ಮಿನಬಾವಿ ಗ್ರಾಮದ ಬಳಿ ಬೈಕ್ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಮ್ಮದ್‍ಅಸ್ಲಾಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

      ಘಟನೆಯಲ್ಲಿ ಹಿಂಬದಿಯ ಸವಾರ ಇಷಾಕ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

      ಮುಂದಿನ ತಿಂಗಳು ಅಸ್ಲಾಂ ಡಿಸೆಂಬರ್ 1 ರಂದು ಮಹಮದ್ ಮದುವೆ ನಿಗದಿಯಾಗಿತ್ತು. ಆದರೆ ಮದುವೆ ನೋಡಬೇಕಿದ್ದ ಆತನ ಪೋಷಕರು ಮಗನ ಶವ ಕಂಡು ಕಣ್ಣೀರಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap