ಬೆಂಗಳೂರು:
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಆರ್ ಪುರಂ ಬಳಿ ಬುಧವಾರ ನಡೆದಿದೆ.
ಮೃತ ನೌಕರನನ್ನು ಕಲ್ಯಾಣನಗರದ ನೊಮಾನ್ ನೌಷಾದ್ (24) ಎಂದು ಗುರುತಿಸಲಾಗಿದೆ. ಎಂದಿನಂತೆ ಇಂದು ಬೆಳಗ್ಗೆ 9 ಗಂಟೆ ಸಮಯದಲ್ಲಿ ನೊಮಾನ್ ತನ್ನ ಬೈಕ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು.
ಕೆಆರ್ ಪುರಂ ಬಳಿಯ ನಾರಾಯಣಪುರದ ಮೂಲಕ ಅತಿ ವೇಗವಾಗಿ ಮುನ್ನುಗ್ಗಿದ ಬಿಎಂಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನೊಮಾನ್ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಸುದ್ದಿ ತಿಳಿದ ಕೆಆರ್ ಪುರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ಹಸ್ತಾಂತರಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಿಎಂಟಿಸಿ ಬಸ್ಗೆ ಸಿಕ್ಕಿ ನಿನ್ನೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಬೆನ್ನಲ್ಲೇ ಇಂದು ಮತ್ತೊಂದು ಇಂತಹದ್ದೇ ಘಟನೆ ಸಂಭವಿಸಿರುವುದು ತೀವ್ರ ಆತಂಕವನ್ನು ಸೃಷ್ಟಿ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/bmtc.gif)