ಪರಿಷತ್ ಚುನಾವಣೆ : ಕಾಂಗ್ರೆಸ್ ನಿಂದ ಇಬ್ಬರ ನಾಮಪತ್ರ ಸಲ್ಲಿಕೆ

ಬೆಂಗಳೂರು:

       ಅಕ್ಟೋಬರ್ 4 ರಂದು ನಡೆಯಲಿರುವ ವಿಧಾನಸಭೆಯಿಂದ ವಿಧಾನಪರಿಷತ್ತಿನ ಉಪ ಚುನಾವಣೆಗೆ ಕಾಂಗ್ರೆಸ್​ ನಿಂದ ಇಬ್ಬರು ಅಭ್ಯರ್ಥಿಗಳು ಇಂದು(ಸೋಮವಾರ) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

      ಡಿಸಿಎಂ ಜಿ.ಪರಮೇಶ್ವರ್​, ಶಾಸಕರಾದ ಕೆ.ಎಸ್​ ಈಶ್ವರಪ್ಪ, ವಿ.ಸೋಮಣ್ಣ ಅವರಿಂದ ತೆರವಾಗಿರುವ ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್​ ಎರಡು ಸ್ಥಾನಗಳಿಗೆ ಸ್ಪರ್ಧಿಸಲು ತೀರ್ಮಾನಿಸಿದ್ದು, ಜೆಡಿಎಸ್​ಗೆ ಒಂದು ಸ್ಥಾನ ಬಿಟ್ಟುಕೊಟ್ಟಿದೆ.

      ತನಗೆ ಸಿಕ್ಕಿರುವ ಎರಡು ಸ್ಥಾನಗಳಿಗೆ ಎಂ‌.ಸಿ. ವೇಣುಗೋಪಾಲ್ ಹಾಗೂ ನಜೀರ್ ಅಹಮದ್ ಅವರ ಹೆಸರನ್ನು ಅಂತಿಮಗೊಳಿಸಿದ್ದ ಕಾಂಗ್ರೆಸ್​ ಆ ಇಬ್ಬರೂ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸಲ್ಲಿಕೆ ಮಾಡಿಸಿದೆ.

      ಡಿಸಿಎಂ ಜಿ.ಪರಮೇಶ್ವರ್​, ಶಾಸಕರಾದ ಕೆ.ಎಸ್​ ಈಶ್ವರಪ್ಪ, ವಿ.ಸೋಮಣ್ಣ ಅವರಿಂದ ತೆರವಾಗಿರುವ ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್​ ಎರಡು ಸ್ಥಾನಗಳಿಗೆ ಸ್ಪರ್ಧಿಸಲು ತೀರ್ಮಾನಿಸಿದ್ದು, ಜೆಡಿಎಸ್​ಗೆ ಒಂದು ಸ್ಥಾನ ಬಿಟ್ಟುಕೊಟ್ಟಿದೆ.

      ಬಳಿಕ ಮಾಧ್ಯಮಗಳೊಂದಿಗೆ ಮಾಡಿದ ಉಪ ಮುಖ್ಯಮಂತ್ರಿ ಪರಮೇಶ್ವರ್, ನಮ್ಮ ಪಕ್ಷದಿಂದ ಇಬ್ಬರು ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್​ನಿಂದ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿಜೆಪಿಯವರು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮೈತ್ರಿಕೂಟದ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

      ಸಚಿವರಾದ ಡಿ.ಕೆ. ಶಿವಕುಮಾರ್, ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಈ ವೇಳೆ ಉಪಸ್ಥಿತರಿದ್ದರು.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link