ಸ್ನೇಹಿತನ ಬರ್ತ್ ಡೇ ಕೇಕ್ ತರಲು ಹೋಗಿ ಶವವಾಗಿ ಹಿಂದಿರುಗಿದ ನವವಿವಾಹಿತ..!

ಮೈಸೂರು:

 

 

     ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಬೈಕ್ ನಲ್ಲಿ  ಹೋದ ನವವಿವಾಹಿತನೊಬ್ಬ ರಸ್ತೆ ಅಪಘಾತಕ್ಕೊಳಗಾಗಿ ಶವವಾಗಿ ಹಿಂದಿರುಗಿದ ಘಟನೆ ನಗರದಲ್ಲಿ  ವರದಿಯಾಗಿದೆ.

      ಹರ್ಷಕುಮಾರ್ ಸಿಂಗ್(28) ಅಪಘಾತದಲ್ಲಿ ಮೃತಪಟ್ಟ ವಿವಾಹಿತ. ಹರ್ಷಕುಮಾರ್ ಸಿಂಗ್ ಮೈಸೂರಿನ ಶಾರದಾದೇವಿನಗರದ ನಿವಾಸಿ ಎಂದು ಹೇಳಲಾಗಿದ್ದು, ಕಳೆದ ನಾಲ್ಕು ತಿಂಗಳ ಹಿಂದೆಷ್ಟೇವಿವಾಹವಾಗಿದ್ದರು ಎಂಬುದು ತಿಳಿದುಬಂದಿದೆ.

      ಕಳೆದ ಭಾನುವಾರ (ನ.25) ಮೈಸೂರಿನ ಕೆ.ಆರ್.ಆಸ್ಪತ್ರೆ ವೃತ್ತದ ಸಮೀಪ ಬೈಕಿನಲ್ಲಿ ಹೋಗುವಾಗ ನಾಯಿಯೊಂದು ಬೈಕ್ ಗೆ ಅಡ್ಡ ಬಂದಿದೆ. ಈ ವೇಳೆ ಹರ್ಷಕುಮಾರ್ ಸಿಂಗ್ ನಾಯಿಯನ್ನು ತಪ್ಪಿಸಲು ಹೋಗಿ ಆಯತಪ್ಪಿ ಬೈಕ್ ನಿಂದ ಬಿದ್ದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಕುಸಿದುಬಿದ್ದಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹರ್ಷಕುಮಾರ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮೈಸೂರಿನ ದೇವರಾಜ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 
 

Recent Articles

spot_img

Related Stories

Share via
Copy link
Powered by Social Snap