ಸಚಿವ ಸ್ಥಾನ ವಂಚಿತ 6 ಮಂದಿ ಬಿಜೆಪಿ ಶಾಸಕರಿಗೆ ಬಿಎಸ್ವೈ ಗಿಫ್ಟ್!!

ಬೆಂಗಳೂರು :

      ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಶಾಸಕರಲ್ಲಿ 6 ಶಾಸಕರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯ ವಿವಿಧ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ನೀಡಿ ಸಿಹಿಸುದ್ಧಿ ನೀಡಿದ್ದಾರೆ.

ಸಮಿತಿ ಹಾಗೂ ಅಧ್ಯಕ್ಷರ ವಿವರ :

  1. ದಾವಣಗೆರೆ ಉತ್ತರ ಶಾಸಕ ಎಸ್.ಎ. ರವೀಂದ್ರನಾಥ್ – ಹಕ್ಕುಬಾಧ್ಯತಾ ಸಮಿತಿ ಅಧ್ಯಕ್ಷ
  2. ಸುಳ್ಯ ಶಾಸಕ ಎಸ್. ಅಂಗಾರ – ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಅಧ್ಯಕ್ಷ
  3. ಹಿರಿಯೂರು ಶಾಸಕಿ ಪೂರ್ಣಿಮಾ- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ
  4. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್- ಗ್ರಂಥಾಲಯ ಸಮಿತಿ ಅಧ್ಯಕ್ಷ
  5. ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ- ಪಂಚಾಯತ್ ರಾಜ್ ಸಂಸ್ಥೆ ಅಧ್ಯಕ್ಷ
  6. ಎಸ್.ಎ.ರಾಮದಾಸ್ – ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

      9 ಜಂಟಿ ಸಮಿತಿ ಹಾಗೂ 6 ವಿಧಾನಸಭೆಯ ಸಮಿತಿಗಳು ಸೇರಿ ಒಟ್ಟು 15 ವಿಧಾನ‌ಮಂಡಲ ಸಮಿತಿಗಳನ್ನು ರಚಿಸಲಾಗಿದ್ದು, ಇಂದಿನಿಂದ ಜಾರಿಗೆ ಬರುವಂತೆ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap