ಬೀದರ್ :
ಜನರು ಕಟ್ಟುನಿಟ್ಟಾಗಿ ಕೊರೊನ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಬೀದರ್ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸರ್ಕಾರ ಪದೇ ಪದೇ ಜನರಿಗೆ ಕೊರೋನಾ ಬಗ್ಗೆ ಜಾಗೃತಿ ಅರಿವು ಮೂಡಿಸುತ್ತಿದೆ. ಕೊರೋನಾ ಅಧಿಕವಾಗಿರುವ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಮಾಡಲಾಗಿದೆ. ಅದಕ್ಕೆ ಜನರು ಸ್ಪಂದಿಸಬೇಕು, ಇಲ್ಲದಿದ್ದರೆ ಬಿಗಿಯಾದ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕಾಗುತ್ತದೆ. ಲಾಕ್ ಡೌನ್ ಅನಿವಾರ್ಯವಾಗಿ ಮಾಡಬೇಕಾಗುತ್ತದೆ, ಅದಕ್ಕೆ ಆಸ್ಪದ ಕೊಡಬೇಡಿ. ಕೊರೊನಾ ನಿಯಂತ್ರಣ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚೆ ನಡೆಸಲಾಗಿದೆ. ಹೆಚ್ಚು ಪ್ರಕರಣಗಳಿರುವ ಕಡೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಸಹ ಸರ್ಕಾರದ ಕ್ರಮಗಳಿಗೆ ಸಹಕರಿಸಬೇಕು ಎಂದು ಸಹ ಮನವಿ ಮಾಡಿಕೊಂಡರು.
ರಾಜ್ಯದ 8 ಜಿಲ್ಲೆಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಅನಾವಶ್ಯಕ ಮನೆಯಿಂದ ಹೊರಬರಬಾರದು. ಅನಿವಾರ್ಯವಾದರೆ ಮಾತ್ರ ಮನೆಯಿಂದ ಹೊರಗೆ ಬರಬೇಕು, ಜನಜಂಗುಳಿ ಸೇರಬಾರದು, ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಸ್ಯಾನಿಟೈಸ್ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ