ರಾಜ್ಯದಲ್ಲಿ ಮತ್ತೆ ಮುಂದುವರಿಯಲಿದೆ ಒಣಹವೆ : ಕಾರಣ ಗೊತ್ತಾ….!?

ಬೆಂಗಳೂರು

    ಬರಗಾಲದಿಂದ ತತ್ತರಿಸಿದ್ದ ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗಿದೆ. ಒಂದು ವಾರದಿಂದಲೂ ಅಲ್ಲಲ್ಲಿ ಕಾಣಿಸುತ್ತಿದ್ದ ಮಳೆ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದ ಉದ್ಯಾನ ನಗರಿ ಬೆಂಗಳೂರಿಗೂ ಕಾಲಿಟ್ಟು ತಂಪೆರೆದಿದೆ. ಇದರ ಬೆನ್ನಲ್ಲೆ ರಾಜ್ಯದಲ್ಲಿ ಮಳೆ ಕಡಿಮೆಯಾಗಲಿದೆ.

   ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಸೋಮವಾರದಿಂದ (ಏಪ್ರಿಲ್ 22) ಕ್ಷೀಣವಾಗಲಿದ್ದು, ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ನಂತರ ಒಣಹವೆ ಮುಂದುವರೆಯಲಿದೆ.

   ಭಾನುವಾರ (ಏಪ್ರಿಲ್ 21) ಕಲಬುರಗಿಯ ಅಫಜಲಪುರ, ಆಳಂದ, ಕೊಪ್ಪಳದ ಕುಕನೂರು, ಉತ್ತರ ಕನ್ನಡದ ಕಿರವತ್ತಿ, ಗೋಕರ್ಣ, ಕಾರವಾರ ವೀಕ್ಷಣಾಲಯ, ಚಾಮರಾಜನಗರದ ಬಿ.ಆ‌ರ್. ಹಿಲ್ಸ್ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇಂದು ಕೂಡ ಕಲಬುರಗಿ, ಬೀದರ್, ಮೈಸೂರು, ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

   ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೀದರ್, ಮೈಸೂರು, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ ಹಾಸನದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap