ಜೋಧ್‌ಪುರದಲ್ಲಿ ಕೋಮುಗಲಭೆ : ಅಂಗಡಿಗೆ ಬೆಂಕಿ….!

ಜೋಧ್‌ಪುರ: 

    ರಾಜಸ್ಥಾನದ ಜೋಧ್‌ಪುರದಲ್ಲಿ ಕೋಮುಗಲಭೆ ಭುಗಿಲೆದಿದ್ದು, ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅಂಗಡಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಎರಡು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

    ಇಲ್ಲಿನ ಸೂರ್ ಸಾಗರ್ ಪ್ರದೇಶದ ರಾಜಾರಾಮ್ ವೃತ್ತದ ಬಳಿಯ ಈದ್ಗಾ ಹಿಂಭಾಗದಲ್ಲಿ ಗೇಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಘರ್ಷಣೆ ಆರಂಭವಾಗಿದೆ. ಈದ್ಗಾ ಹಿಂಬದಿಯಲ್ಲಿ ಜನರ ಓಡಾಟ ಇಲ್ಲದಂತೆ ಗೇಟ್ ಹಾಕುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ನಿನ್ನೆ ರಾತ್ರಿ, ಉದ್ವಿಗ್ನತೆ ಉಲ್ಬಣಿಸಿ ಕೆಲವರು ಕಲ್ಲು ತೂರಾಟ ನಡೆಸಿದರು. ಹೀಗಾಗಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಡಿಸಿಪಿ ರಾಜೇಶ್ ಕುಮಾರ್ ಯಾದವ್ ಹೇಳಿದ್ದಾರೆ.

   “ಒಂದು ಅಂಗಡಿ ಮತ್ತು ಟ್ರಾಕ್ಟರ್‌ಗೆ ಬೆಂಕಿ ಹಚ್ಚಲಾಗಿದೆ ಮತ್ತು ಜೀಪ್ ನ್ನು ಧ್ವಂಸಗೊಳಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪೊಲೀಸರು ಲಾಠಿ ಹಾಗೂ ನಾಲ್ಕೈದು ಸುತ್ತು ಅಶ್ರುವಾಯು ಸೆಲ್ ಸಿಡಿಸಿ ಜನರನ್ನು ಚದುರಿಸಿದ್ದಾರೆ. ಶುಕ್ರವಾರ ತಡರಾತ್ರಿ ವೇಳೆಗೆ ಪರಿಸ್ಥಿತಿ ಹತೋಟಿಗೆ ಬಂದರೂ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

   ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶನಿವಾರ ಬೆಳಗ್ಗೆ ಭಾರೀ ಪೊಲೀಸ್ ಮತ್ತು ರಾಜಸ್ಥಾನ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ. ಎರಡೂ ಕಡೆಯ ದೂರುಗಳ ಆಧಾರದ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ರಾಜೇಂದ್ರ ಸಿಂಗ್ ಹೇಳಿದ್ದಾರೆ. ಎರಡೂ ಕಡೆಯ ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಶಂಕಿತರನ್ನು ಬಂಧಿಸಲು ಪೊಲೀಸರು ಇನ್ನೂ ಸ್ಥಳೀಯ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

   ಶುಕ್ರವಾರ ಸಂಜೆ ಈದ್ಗಾದ ಹಿಂಭಾಗದಲ್ಲಿ ಗೋಡೆಯ ನಿರ್ಮಾಣಕ್ಕೆ ಸ್ಥಳೀಯರು ವಿರೋಧಿಸಿದಾಗ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟ, ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ ಕೃತ್ಯಗಳೊಂದಿಗೆ ಹಿಂಸಾತ್ಮಕ ರೂಪ ಪಡೆಯಿತು.

   ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಲು ಮುಂದಾದಾಗ ಕೆಲವರು ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದರು. ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡುವಾಗ ಅವರತ್ತು ಕಲ್ಲು ತೂರಾಟ ನಡೆದಿದೆ. ಉಭಯ ಸಮುದಾಯಗಳ ಹಿರಿಯ ಸದಸ್ಯರ ನೆರವಿನೊಂದಿಗೆ ಪೊಲೀಸರಿಂದ ಅಲ್ಪಾವಧಿಯ ಶಾಂತಿ ಉಂಟಾಯಿತು. ಆದರೆ ಹಠಾತ್ ಕಲ್ಲು ತೂರಾಟ, ಪರಿಸ್ಥಿತಿಯನ್ನು ಮತ್ತೆ ಉದ್ವಿಗ್ನಗೊಳಿಸಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap