ರೈತ ವಿರೋಧಿ ಕೃಷಿ ಕಾಯ್ದೆ ವಿಚಾರದಲ್ಲಿ ಕಠಿಣ ನಿರ್ಧಾರ : ಸಿಎಂ

ಬೆಂಗಳೂರು:

    ಹಿಂದಿನ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

    ಶಾಸಕರಾದ ಬಿ.ಆರ್ ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗವು ಇಂದು ಭೇಟಿಯಾದ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡಿದರು. 

    ಭೂ ಸುಧಾರಣಾ ಕಾಯ್ದೆ ಬಗ್ಗೆ ಚರ್ಚೆ ಆಗಿದ್ದು, ಮುಂದಿನ ಅಧಿವೇಶನ ದಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು. ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಇಂದು ಸದನದಲ್ಲಿ ಚರ್ಚೆ ನಡೆದಿದೆ. ರೈತರ ಸಮಸ್ಯೆ ಬಗ್ಗೆ ವಿಸ್ತ್ರುತ ಚರ್ಚೆ ಮಾಡಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು. ಬಜೆಟ್ ನಿಂದ ಹೊರಗುಳಿದಿರುವ ಕೆಲವು ವಿಚಾರಗಳ ಬಗ್ಗೆ ಚರ್ಚಿಸಬೇಕಿದ್ದು, ಸರ್ಕಾರ ಮಾರ್ಪಾಡು ಮಾಡಿರುವ ಎಪಿಎಂಸಿ ಕಾಯ್ದೆಯ ಬಗ್ಗೆಯೂ ಚರ್ಚಿಸಬೇಕಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ತಿಳಿಸಿದರು.

 

    ಗೋಹತ್ಯೆ ಹತ್ಯೆ ನಿಷೇಧ ಕೂಡ ವಾಪಸ್ಸು ಪಡೆಯಬೇಕು. ಹಿಂದೆ ಕೃಷಿ ಬೆಲೆ ಆಯೋಗವನ್ನು ಘೋಷಣೆ ಮಾಡಲಾಗಿತ್ತು. ಅದಕ್ಕೆ ಶಾಸನಾತ್ಮಕ ರೂಪ ಕೊಟ್ಟು, ಆವರ್ತ ನಿಧಿ ನೀಡಬೇಕು. ಕೇಂದ್ರ ಸರ್ಕಾರ ಪಡಿತರ ವ್ಯವಸ್ಥೆಗೆ ಅಕ್ಕಿ ಕೊಡದೆ ರಾಜಕೀಯ ಮಾಡಿರುವುದನ್ನು ವಿರೋಧಿಸುತ್ತೇವೆ.  ಪೌಷ್ಟಿಕ ಆಹಾರ ನೀಡಲು ಪಡಿತರ ವ್ಯವಸ್ಥೆಗೆ ರೈತರೆ ಆಹಾರ ಧಾನ್ಯ ಕೊಡುವ ವ್ಯವಸ್ಥೆ ಮಾಡಬಹುದು. ಆಗ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ರೈತರು ಸಲಹೆ ನೀಡಿದರು. ಸರ್ಕಾರ ರೈತರ ಹಿತವನ್ನು ಕಾಪಾಡಬೇಕು ಎಂದು ರೈತರು  ಮನವಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap