ಬೆಂಗಳೂರು:
ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 14 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ಕುರಿತು ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿತು, ಮತ್ತು ಆ ಕ್ಷಣದಲ್ಲಿ ಸರವಣನ್ ಕಂದಗುರುವನ್ನು ತಳ್ಳಿದ ಪರಿಣಾಮ ಆತ ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎಂದು ಹೇಳಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದರು.
ಘಟನೆಯ ನಂತರ, ಸೇಲಂ ಪೊಲೀಸರು ಸರವಣನ್ನ್ನು ವಶಕ್ಕೆ ಪಡೆದಿದ್ದಾರೆ, ಮುಂದಿನ ಕಾನೂನು ಕ್ರಮಗಳಿಗಾಗಿ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ದೃಢಪಡಿಸಿದರು.ವಾಗ್ವಾದಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಕ್ಟೋಬರ್ 2024 ರಲ್ಲಿ, ಪ್ರೆಸಿಡೆನ್ಸಿ ಕಾಲೇಜಿನ 19 ವರ್ಷದ ವಿದ್ಯಾರ್ಥಿ ಎ ಸುಂದರ್, ಪಚೈಯಪ್ಪ ಕಾಲೇಜಿನ ವಿದ್ಯಾರ್ಥಿಗಳ ಗುಂಪಿನಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿದ್ದ.
