ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ಹೃದಯಘಾತದಿಂದ ಸಾವು

ತುಮಕೂರು:

     ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಗುಲ್ಬರ್ಗ ಮೂಲದ ವಿದ್ಯಾರ್ಥಿಯೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನ ಚಿಕ್ಕತೊಟ್ಲುಕೆರೆಯಲ್ಲಿ ನಡೆದಿದೆ.

    ಹೋಬಳಿ ಮಟ್ಟದಲ್ಲಿ ನಡೆಯುತ್ತಿದ್ದ ಕ್ರೀಡೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿದ್ದ ಗುಲ್ಬರ್ಗ ಮೂಲದ ಬೆಳದರ ಗ್ರಾಮಾಂತರ ಪ್ರೌಢಶಾಳೆಯ ವಿದ್ಯಾರ್ಥಿ ಭೀಮಶಂಕರ್ ರಿಲೆ ಆಟದಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಗೆದಿದ್ದ. ಆದರೆ ಬಹುಮಾನ ಸ್ವೀಕರಿಸುವ ಮುಂಚೆಯೇ ಹೃದಯ ಘಾತದಿಂದ ನಿಧನರಾಗಿದ್ದು, ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಯ ತಂದೆ ತಾಯಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಮಗನ ಸಾವಿನಿಂದ ಪೋಷಕರು ಕಂಗಾಲಾಗಿದ್ದು ಆಕ್ರಂದನ ಮುಗಿಲುಮಟ್ಟಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap