ಸುಹಾಸ್ ಶೆಟ್ಟಿ ಭೀಕರ ಹತ್ಯೆ: ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಿ

ದಾವಣಗೆರೆ:

   ಮಂಗಳೂರಿನಲ್ಲಿ ಗುರುವಾರ ನಡೆದ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳ ತನಿಖೆಗೆ ಒಪ್ಪಿಸಬೇಕು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಜಿಹಾದಿ ಶಕ್ತಿಗಳ ಕೈವಾಡ ಇರುವ ಅನುಮಾನ ಇದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ಸುಹಾಸ್ ಶೆಟ್ಟಿ ಹತ್ಯೆ ಕೇಸನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ|ಜಿ. ಪರಮೇಶ್ವರ್ ಅವರಂತಹವರು ಸುಹಾಸ್ ಶೆಟ್ಟಿ ರೌಡಿ ಶೀಟರ್ ಎಂದು ಹೇಳಿ ಪ್ರಕರಣವನ್ನೇ ಮುಚ್ಚಿ ಹಾಕಲು ಮುಂದಾಗಿದ್ದಾರೆ. ಸ್ವತಃ ಸಿಎಂ, ಗೃಹ ಸಚಿವರು ಈ ರೀತಿಯ ಹೇಳಿಕೆ ನೀಡುವ ಮೂಲಕ ಪೊಲೀಸ್ ಇಲಾಖೆಗೆ ಮುಕ್ತ ತನಿಖೆಗೆ ಅವಕಾಶ ನೀಡುತ್ತಿಲ್ಲ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಸಮಗ್ರ ತನಿಖೆ ಆಗಬೇಕು. ಹಾಗಾಗಿ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

   ಸ್ಪೀಕರ್ ಯು.ಟಿ.ಖಾದರ್ ತನಿಖಾಧಿಕಾರಿಯಂತೆ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಫಾಜಿಲ್ ಕುಟುಂಬ ಭಾಗಿ ಆಗಿಲ್ಲ ಎಂದು ಹೇಳಿದ್ದಾರೆ. ಪ್ರಕರಣದ ತನಿಖೆಯನ್ನೇ ದಾರಿ ತಪ್ಪಿಸುವ ಕೆಲಸವನ್ನು ಸಿದ್ದರಾಮಯ್ಯ, ಪರಮೇಶ್ವರ್, ಖಾದರ್ ಸೇರಿದಂತೆ ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ ಎಂದು ದೂರಿದರು.

   ಮಂಗಳೂರಿನಲ್ಲಿ ಕೆಲ ಅಲ್ಪಸಂಖ್ಯಾತರ ಗೂಂಡಾಗಳು ಗೃಹ ಸಚಿವ ಪರಮೇಶ್ವರಗೆ ಬೆದರಿಕೆ ಹಾಕುತ್ತಾರೆ. ಬ್ಲಾಕ್ ಮೇಲ್‌ಗೆ ಹೆದರಿ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಲಿಲ್ಲ. ಸಿದ್ದರಾಮಯ್ಯ ಹೇಳಿಕೆಯನ್ನೇ ಪರಮೇಶ್ವರ ಪುನರುಚ್ಛರಿಸಿದರು. ಅವರು ಗೃಹ ಸಚಿವರಾಗಿ ಮುಂದುವರಿಯಲು ನಾಲಾಯಕ್. ಗೃಹ ಮಂತ್ರಿ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

   ಸುಹಾಸ್ ಹತ್ಯೆ ಪ್ರಕರಣದ ಮೊದಲ ಆರೋಪಿ ಆದಿಲ್ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ಕೊಟ್ಟಿದ್ದೇ ಸುಳ್ಳಾ ಮಿಸ್ಟರ್ ಯು.ಟಿ.ಖಾದರ್, ಸಭಾಪತಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಅವರು ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು

Recent Articles

spot_img

Related Stories

Share via
Copy link