ಕೊರಟಗೆರೆ : ಪ್ರೀತಿ ತಂದ ಕುತ್ತು ; ಯುವಕ ಆತ್ಮಹತ್ಯೆಗೆ ಶರಣು!!


 ತುಮಕೂರು : 

      ಪೋಷಕರು ಹೇಳಿದ ಬುದ್ಧಿವಾದಕ್ಕೆ ಮನನೊಂದ ಯುವಕನೊಬ್ಬ ಕ್ರಿಮಿನಾಶಕ ಔಷಧಿ ಸೇವಿಸಿ ಮೃತಪಟ್ಟಿರುವ ಘಟನೆ ಕೊರಟಗೆರೆಯ ಕುಂಬಾರರ ಬೀದಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಅಭಿಷೇಕ್ (19) ಎಂದು ಗುರುತಿಸಲಾಗಿದೆ.

      ಅಭಿಷೇಕ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇದು ಮನೆಯವರಿಗೆ ತಿಳಿದಾಗ ಅವರು ಆತನಿಗೆ ಬುದ್ಧಿವಾದ ಹೇಳಿದರು. ಇಷ್ಟು ಚಿಕ್ಕವಯಸ್ಸಿನಲ್ಲಿ ನೀನು ಪ್ರೀತಿಸುವುದು ಅಷ್ಟು ಸರಿಯಲ್ಲ. ದಯವಿಟ್ಟು ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡ ಎಂದು ಬುದ್ಧಿವಾದ ಹೇಳಿದರು.

      ಇದರಿಂದ ಮನನೊಂದ ಅಭಿಷೇಕ್ ಪಟ್ಟಣದ ಹೊರವಲಯದಲ್ಲಿರುವ ಬೈಲಾಂಜನೇಯಸ್ವಾಮಿ ದೇವಾಲಯದ ಬಳಿ ಕ್ರಿಮಿನಾಶಕ ಔಷಧಿ ಸೇವಿಸಿದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದ. ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link