ಗದಗ:
ಯಾವುದೇ ಸರ್ಕಾರಿ ಉದ್ಯೋಗಿ ತನ್ನ ಕೆಲಸಕ್ಕೆ ಮಾಡುವ ಮೋಸ ಅಥವಾ ಕೆಲಸದ ಸಮಯದಲ್ಲಿ ತೋರುವ ಅಸಡ್ಡೆ ಎಲ್ಲವೂ ಕರ್ತವ್ಯ ಲೋಪ ಎಂದೇ ಪರಿಗಣಿಸಲ್ಪಡುತ್ತವೆ ಆದರೆ ಒಬ್ಬ ಸರ್ಕಾರಿ ವೈಸ್ಯ ನಿರ್ಲಕ್ಷ್ಯ ತೋರಿದರೆ ವ್ಯಕ್ತಿಯ ಜೀವವೇ ಹೋಗುತ್ತದೆ ಅದೇ ರೀತಿಯಲ್ಲಿ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಸಾವು ಎಂಬ ಆರೋಪ ಆಗಾಗ ಕೇಳಿ ಬರುತ್ತಲಿರುತ್ತದೆ. ಅಂಥ ಪ್ರಕರಣಗಳ ಪಟ್ಟಿಗೆ ಇಂದು ಇನ್ನೊಂದು ಸೇರ್ಪಡೆ ಆಗಿದೆ. ಇಲ್ಲಿ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಹೊಡೆದಿದ್ದು, ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ ಎಂದೂ ಹೇಳಲಾಗಿದೆ.
ಗದಗ ಜಿಮ್ಸ್ನಲ್ಲಿ ಈ ಪ್ರಕರಣ ನಡೆದಿದೆ. ಹೆರಿಗೆಗೆ ಎಂದು ಬಂದಿದ್ದ ಮಹಿಳೆಯನ್ನು ಹೆರಿಗೆಗೆ ಒಳಪಡಿಸದೆ ವಿಳಂಬ ಮಾಡಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ, ಹೆರಿಗೆ ಮಾಡಿಸದೆ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಬಾರಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಬಳಿಕ ಆಶಾ ಕಾರ್ಯಕರ್ತೆ ಮೇಲೂ ಜಿಮ್ಸ್ ಆಸ್ಪತ್ರೆ ವೈದ್ಯೆ ಹಲ್ಲೆ ಮಾಡಿರುವ ಆರೋಪವೂ ಇದೆ. ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವಿಗೀಡಾಗಿದ್ದು, ಮಗುವಿನ ಸಾವಿಗೆ ಕಾರಣ ಏನು ಎಂಬುದನ್ನು ಕೂಡ ವೈದ್ಯರು ತಿಳಿಸಿಲ್ಲ ಎಂದು ಗರ್ಭಿಣಿಯ ಕಡೆಯವರು ಆರೋಪಿಸಿದ್ದಾರೆ.
ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಮತ್ತೊಂದೆಡೆ ವೈದ್ಯೆಯ ಹಲ್ಲೆಯನ್ನು ಖಂಡಿಸಿ ಜಿಮ್ಸ್ ಆಸ್ಪತ್ರೆ ಎದುರು ನೂರಾರು ಆಶಾ ಕಾರ್ಯಕರ್ತೆಯರ ಧರಣಿ ನಡೆಸಿದ್ದು, ಜಿಮ್ಸ್ ವೈದ್ಯರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ಕಾಲಿನಲ್ಲಿ ನಿಲ್ಲಿಸಿ ಆಶಾ ಕಾರ್ಯಕರ್ತೆ ಜೊತೆ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಕೂಡ ಆರೋಪಿಸಲಾಗಿದ್ದು, ವೈದ್ಯರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/04/Untitled-9.jpg)