ದೆಹಲಿ ಸಿಎಂಗೆ ಸುಪ್ರೀಂ ಕೋರ್ಟ್‌ ಕಡೆಯಿಂದ ವಿಶೇಷ ಆತಿ‍ಥ್ಯ : ಅಮಿತ್‌ ಷಾ

ನವದೆಹಲಿ:

     ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ, ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಜನ ಭಾವಿಸಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.

    ಕೇಜ್ರಿವಾಲ್ ಪ್ರಕರಣದ ತೀರ್ಪು ಸಾಮಾನ್ಯ ನ್ಯಾಯಾಂಗ ಆದೇಶವಲ್ಲ ಎಂದು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.

    “ಕಾನೂನನ್ನು ಅರ್ಥೈಸುವ ಹಕ್ಕು ಸುಪ್ರೀಂ ಕೋರ್ಟ್‌ಗೆ ಇದೆ. ಇದು ವಾಡಿಕೆಯ ತೀರ್ಪು ಅಲ್ಲ ಎಂದು ನಾನು ನಂಬುತ್ತೇನೆ. ಈ ದೇಶದ ಬಹಳಷ್ಟು ಜನರು ದೆಹಲಿ ಸಿಎಂಗೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ನಂಬುತ್ತಾರೆ” ಎಂದು ಶಾ  ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap