ನವದೆಹಲಿ:
ಸನಾತನ ಧರ್ಮದ ನಿರ್ಮೂಲನೆ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿಮಾಡಿದೆ.
ಸನಾತನ ಧರ್ಮದ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆ ಮಾಜಿ ಸಂಸದ ಎ ರಾಜಾ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಸನಾತನ ಧರ್ಮದ ಹೇಳಿಕೆ ವಿಚಾರವಾಗಿ ಚೆನ್ನೈನ ವಕೀಲರೊಬ್ಬರು ಉದಯನಿಧಿ ಮತ್ತು ರಾಜಾ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.
![](https://prajapragathi.com/wp-content/uploads/2023/08/supreme-1.jpg)