ದರ್ಶನ್‌ ಗೆ ಸರ್ಜಿಕಲ್‌ ಚೇರ್‌ : ವೈದ್ಯಕೀಯ ವರದಿ ನಂತರ ಒಪ್ಪಿಗೆ …!

ಬಳ್ಳಾರಿ :

   ನಟ ದರ್ಶನ್​ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ಬೇಕು ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ತಪಾಸಣೆ ನಡೆಸಿ ವರದಿ ನೀಡಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ಬಳಿಕ ಸರ್ಜಿಕಲ್ ಚೇರ್​ ನೀಡಲು ಅನುಮತಿ ಸಿಕ್ಕಿದೆ. ಇದಕ್ಕಾಗಿ ಎರಡು ವರದಿಗಳನ್ನು ಪರಿಶೀಲಿಸಲಾಗಿತ್ತು. ದರ್ಶನ್​ ಕುಟುಂಬಸ್ಥರು ನೀಡಿದ ವರದಿ ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಕೊಟ್ಟ ವರದಿಯನ್ನೂ ಪರಿಶೀಲಿಸಿದ ಬಳಿಕ ನಟನಿಗೆ ಸರ್ಜಿಕಲ್​ ನೀಡಲು ಅಪ್ರೂವಲ್​ ಸಿಕ್ಕಿದೆ.

   ದರ್ಶನ್​ಗೆ ಆರೋಗ್ಯ ಸಮಸ್ಯೆ ಇದೆ. ಜೈಲು ಸೇರುವುದಕ್ಕೂ ಮುನ್ನ ಅವರ ಕೈಗೆ ಸರ್ಜರಿ ಆಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ತೂಕ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಮನೆ ಊಟಕ್ಕೆ ಮನವಿ ಮಾಡಿದ್ದರು. ಆದರೆ ಜೈಲಿನ ನಿಯಮ ಉಲ್ಲಂಘನೆ ಮಾಡಿದ ವಿಷಯ ಬಹಿರಂಗ ಆದಾಗ ಅನಾರೋಗ್ಯದ ಬಗ್ಗೆ ಅನುಮಾನ ಮೂಡಿವಂತಾಯಿತು.ಇದು ಹೈ-ಪ್ರೊಫೈಲ್​ ಕೇಸ್​ ಆದ್ದರಿಂದ ತನಿಖೆಯ ಪ್ರತಿ ಹಂತದ ಮೇಲೆ ಕಣ್ಣು ಇಡಲಾಗಿದೆ. ದರ್ಶನ್​ ಬಳ್ಳಾರಿ ಜೈಲಿಗೆ ಸ್ಥಳಾಂತರ ಆಗುವಾಗ ಅವರ ಕೂಲಿಂಗ್​ ಗ್ಲಾಸ್​ ಧರಿಸಿದ್ದಕ್ಕೆ ಕೂಡ ಆಕ್ಷೇಪ ವ್ಯಕ್ತವಾಯಿತು.

Recent Articles

spot_img

Related Stories

Share via
Copy link
Powered by Social Snap