ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಂದುವರೆದ ನಿರಾಸೆ!!

ಬೆಂಗಳೂರು : 

      ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದ ಶಿಕ್ಷಕರು ನಿರಾಸೆಯಲ್ಲೇ ದಿನ ದೂಡುವಂತಾಗಿದೆ.

       2019-20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಒಳಗಾದ ಶಿಕ್ಷಕರಿಗೆ ಪ್ರಸಿದ್ಧ ವರ್ಗಾವಣೆ ಸಂದರ್ಭದಲ್ಲಿ ವಿಶೇಷ ಆದ್ಯತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಕೆಎಟಿ ಆದೇಶ ನೀಡಿದೆ.

      2016 -17 ರಲ್ಲಿ ಹೆಚ್ಚುವರಿ ವರ್ಗಾವಣೆಯಾಗಿ ಹೊರಗಿನ ತಾಲೂಕಿಗೆ ಹೋದ ಕೆಲವು ಶಿಕ್ಷಕರು ಕೆಎಟಿಗೆ ಅರ್ಜಿ ಸಲ್ಲಿಸಿದ್ದು, ಹೀಗಾಗಿ ಯಥಾಸ್ಥಿತಿಗೆ ಕೆಎಟಿ ಆದೇಶಿಸಿದೆ. ಇದರಿಂದಾಗಿ ಸುಮಾರು 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಯಾಗದೇ ನಿರಾಸೆಯಲ್ಲಿದ್ದಾರೆ.

       ಶಿಕ್ಷಕವರ ವರ್ಗಾವಣೆ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap