ಟೀಮ್ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷರ ಬದಲಾವಣೆ?

ಮುಂಬಯಿ:

   ರಾಷ್ಟ್ರೀಯ ಕ್ರಿಕೆಟ್​ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್​ ಅಗರ್ಕರ್  ಅವರ ಕಾರ್ಯಾವಧಿ​ಮುಂದಿನ ತಿಂಗಳು ಮುಕ್ತಾಯಗೊಳ್ಳಲಿದೆ. ಆದರೆ ಈ ಹುದ್ದಗೆ ಹೊಸಬರು ಆಯ್ಕೆಯಾಗುವ ಸಾಧ್ಯತೆ ಕಮ್ಮಿ ಎನ್ನಲಾಗಿದೆ. ಎರಡು ಐಸಿಸಿ ಟ್ರೋಫಿ ವಿಜೇತ  ತಂಡವನ್ನು ಮತ್ತು ರೋಹಿತ್​, ಕೊಹ್ಲಿ  ಆರ್​. ಅಶ್ವಿನ್​  ನಿವೃತ್ತಿಯಂಥ ದಿಟ್ಟ ನಿರ್ಧಾರ ಕೈಗೊಂಡಿರುವ ಕಾರಣ ಅಗರ್ಕರ್​ ಮತ್ತೆ ಈ ಹುದ್ದೆಯಲ್ಲಿ ಮುಂದುವರಿಯುವ ನಿರೀಕ್ಷೆ ಇದೆ. 2023ರ 4ರಂದು ಅಗರ್ಕರ್​ 2 ವರ್ಷಗಳ ಅವಧಿಗೆ ನೇಮಕಗೊಂಡಿದ್ದರು. ಬಿಸಿಸಿಐ(BCCI) ಮೂಲಗಳ ಪ್ರಕಾರ, 2026ರ ತವರಿನ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಆಯ್ಕೆ ಮಾಡುವವರೆಗೆ ಅಗರ್ಕರ್ ಹುದ್ದೆಯಲ್ಲಿ ಮುಂದುವರಿಯುವ ನಿರೀಕ್ಷೆ ಇದೆ ಎನ್ನಲಾಗಿದೆ. 

   ಅಹಮದಾಬಾದ್​ ವಿಮಾನ ದುರಂತ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಆ್ಯಂಡರ್ಸನ್‌-ತೆಂಡೂಲ್ಕರ್‌ ಟ್ರೋಫಿ ಅನಾವರಣ ಕಾರ್ಯಕ್ರಮ ಗುರುವಾರ(ಜೂ.19) ನಡೆಯಲಿದೆ.ಆದರೆ ಟ್ರೋಫಿ ಅನಾವರಣಕ್ಕೆ ಯಾವುದೇ ಸಮಾರಂಭ ನಡೆಯುವುದಿಲ್ಲ. ಬದಲಾಗಿ ಪ್ರಕಟಣೆಯ ಮೂಲಕ ಟ್ರೋಫಿ ಅನಾವರಣಗೊಳ್ಳಲಿದೆ. ಜತೆಗೆ ಸರಣಿಯ ಹೆಸರು ಹೊಂದಿರುವ ಇಬ್ಬರು ದಿಗ್ಗಜ ಕ್ರಿಕೆಟಿಗರಾದ ಸಚಿನ್​ ತೆಂಡುಲ್ಕರ್​ ಮತ್ತು ಜೇಮ್ಸ್​ ಆಂಡರ್​ಸನ್​ ಮೊದಲೇ ಚಿತ್ರೀಕರಿಸಲಾಗಿರುವ ವಿಡಿಯೋ ಮೂಲಕ ಸರಣಿಯ ಪ್ರಸಾರ ವಾಹಿನಿಯಲ್ಲಿ ಹೇಳಿಕೆ ನೀಡಲಿದ್ದಾರೆ. ಪಟೌಡಿ ಅವರಿಗೂ ಗೌರವ ಸಲ್ಲಲಿದೆ. ಸರಣಿ ವಿಜೇತ ನಾಯಕನಿಗೆ ಪಟೌಡಿ ಮೆಡಲ್‌ ನೀಡಲು ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ನಿರ್ಧರಿಸಿದೆ.

   ತಾಯಿಯ ತುರ್ತು ವೈದ್ಯಕಿಯ ಪರಿಸ್ಥಿತಿಯಿಂದಾಗಿ ಹೋದ ವಾರ ತವರಿಗೆ ಮರಳಿದ್ದ ಭಾರತ ತಂಡದ ಮುಖ್ಯ ಕೋಚ್‌ ಗೌತಮ್‌ ಗಂಭೀರ್ ತಂಡವನ್ನು ಸೇರಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ಟೆಸ್ಟ್‌ ಪಂದ್ಯ ಶುಕ್ರವಾರ ಲೀಡ್ಸ್‌ನಲ್ಲಿ ಆರಂಭವಾಗಲಿದೆ.  ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್(ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್‌ ಬುಮ್ರಾ(ಕೆಲವು ಪಂದ್ಯಕ್ಕೆ ಮಾತ್ರ), ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಹರ್ಷಿತ್‌ ರಾಣಾ.

Recent Articles

spot_img

Related Stories

Share via
Copy link