ಶ್ರೀನಗರ:
ಪಹಲ್ಗಾಮ್ ದಾಳಿಯ ನಂತರ ಭಯೋತ್ಪಾದನೆ ವಿರುದ್ಧ ಸಶಸ್ತ್ರ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಕಾಶ್ಮೀರದಾದ್ಯಂತ ಉಗ್ರರಿಗಾಗಿ ಸೇನೆ ಶೋಧ ನಡೆಸುತ್ತಿದೆ. ಶೋಪಿಯಾನ್ನಲ್ಲಿ ಸೇನೆ, ಪೊಲೀಸರು ಮತ್ತು ಸಿಆರ್ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಂಧಿತರಿಂದ ಎರಡು ಎಕೆ -56 ರೈಫಲ್ಗಳು, ನಾಲ್ಕು ಮ್ಯಾಗಜೀನ್ಗಳು, ಎರಡು ಹ್ಯಾಂಡ್ ಗ್ರೆನೇಡ್ಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
5,400 ರೂ. ಮೌಲ್ಯದ ನಗದು ಮತ್ತು ಆಧಾರ್ ಕಾರ್ಡ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್ನ ಬಸ್ಕುಚನ್ ಇಮಾಮ್ಸಾಹಿಬ್ನಲ್ಲಿ ನಡೆದ ಕಾರ್ಯಾಚರಣೆಯನ್ನು ಸೇನೆಯ 44 ಆರ್ಆರ್, ಪೊಲೀಸರು ಮತ್ತು 178 ಸಿಆರ್ಪಿಎಫ್ ನಡೆಸಿದೆ. ಇಬ್ಬರು ಎಲ್ಇಟಿ ಭಯೋತ್ಪಾದಕರು – ಇರ್ಫಾನ್ ಬಶೀರ್ ಮತ್ತು ಉಜೈರ್ ಸಲಾಮ್ – ಶರಣಾಗಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಂದು ಪ್ರಮುಖ ಕಾರ್ಯಾಚರಣೆಯ ಯಶಸ್ಸಿನಲ್ಲಿ, ಬಸ್ಕುಚಾನ್ನಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು… ಆ ಪ್ರದೇಶವನ್ನು ಸುತ್ತುವರಿಯಲಾಯಿತು. ಭದ್ರತಾ ಪಡೆಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಸೆರೆ ಹಿಡಿದಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಳೆದ ಎರಡು ದಿನಗಳ ಮೊದಲು ಇದೇ ಸ್ಥಳದಲ್ಲಿ ಸೇನೆ ಭರ್ಜರಿ ಬೇಟೆಯನ್ನಾಡಿತ್ತು. ಸೇನೆಯ 34 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ಗುಂಪು (SOG) ಮತ್ತು CRPF 178 ಬೆಟಾಲಿಯನ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡಿಕೆ ಪೋರಾ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರ ಸಹಚರರನ್ನು ಬಂಧಿಸಿಲಾಗಿತ್ತು. ಭದ್ರತಾ ಪಡೆಗಳು ಅವರ ಬಳಿ ಇದ್ದ ಎರಡು ಪಿಸ್ತೂಲ್ಗಳು, ನಾಲ್ಕು ಗ್ರೆನೇಡ್ಗಳು, 43 ಜೀವಂತ ಗುಂಡುಗಳುನ್ನು ವಶ ಪಡಿಸಿಕೊಂಡಿದ್ದರು.
ಮೇ 13 ರಂದು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲರ್ನ ಶುಕ್ರೂ ಅರಣ್ಯ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಗೆ ಸೇರಿದ ಮೂವರು ಭಯೋತ್ಪಾದಕರನ್ನು ಸೆರೆ ಹಿಡಿಯಲಾಗಿತ್ತು. ಅವರಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ನ ಉನ್ನತ ಕಮಾಂಡರ್ ಶಾಹಿದ್ ಕುಟ್ಟಯ್ ಕೂಡ ಸೇರಿದ್ದಾನೆ. ಶೋಪಿಯಾನ್ನ ಹೀರ್ಪೋರಾದಲ್ಲಿ ಸರಪಂಚ್ ಮೇಲಿನ ದಾಳಿ ಮತ್ತು ಏಪ್ರಿಲ್ 8, 2024 ರಂದು ಡ್ಯಾನಿಶ್ ರೆಸಾರ್ಟ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕುಟ್ಟಯ್ ಭಾಗಿಯಾಗಿದ್ದ.
