ರಾಜಕೀಯಕ್ಕೆ “ತಳಪತಿ ವಿಜಯ್‌ ” ಎಂಟ್ರಿ….!

ತಮಿಳುನಾಡು : 

      49 ವರ್ಷ ವಯಸ್ಸಿನ ವಿಜಯ್ ತಮಿಳು ಸಿನಿಮಾ ಜಗತ್ತಿನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರು ಹಾಗೂ ಸಾಕಷ್ಟು ಜನಪ್ರಿಯತೆ ಗಳಿಸಿರುವ ನಟರು ಹೌದು.

      ಇವರು 2026 ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.

      ಹತ್ತಾರು ವರ್ಷಗಳಿಂದ ಒಟ್ಟಿಗಿದ್ದ ತಮ್ಮ ಹಿರಿಯರಾದ ರಜನೀಕಾಂತ್ ಅವರಿಗಿಂತ ವಿಜಯ್ ಭಿನ್ನವಾಗಿ ರಾಜಕೀಯ ಎಂಟ್ರಿಗೆ ಯೋಚಿಸಿದ್ದಾರೆ. ಇದಕ್ಕಾಗಿ ದಳಪತಿ ವಿಜಯ್ ತಮ್ಮ ಅಭಿಮಾನಿಗಳ ಸಂಘವಾದ ‘ವಿಜಯ್ ಮಕ್ಕಳ್ ಇಯಕ್ಕಂ’ ಅನ್ನು ತಮ್ಮ 234 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಜೆಯ ಟ್ಯೂಷನ್ ಸೆಂಟರ್‌ಗಳಾಗಿ ಪ್ರಾರಂಭಿಸಲು ಸೂಚನೆ ನೀಡಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಅಡಿಪಾಯ ಹಾಕುತ್ತಿರುವುದಾಗಿ ಮಾಹಿತಿ ಲಭಿಸಿದೆ.

     ರಾಜ್ಯದ ಎಲ್ಲಾ 234 ಅಸೆಂಬ್ಲಿ ಕ್ಷೇತ್ರಗಳಲ್ಲಿ ದ್ವೀತಿಯ ಪರೀಕ್ಷೆಗಳಲ್ಲಿ ಟಾಪರ್‌ ಆಗಿರುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಗಿತ್ತು. ಇದೀಗ ವಿಜಯ್ ಮಕ್ಕಳ್ ಇಯಕ್ಕಂ ಹೆಸರಿನಲ್ಲಿ ಟ್ಯೂಷನ್ ಸೆಂಟರ್ ಆರಂಭಕ್ಕೆ ಸಿದ್ದತೆಗಳು ನಡೆದಿವೆ ಎನ್ನಲಾಗಿದೆ. ಇದು ವಿಜಯ್ ಅವರ ರಾಜಕೀಯ ಪ್ರವೇಶಕ್ಕೆ ಅಡಿಪಾಯವನ್ನು ಸಿದ್ಧಪಡಿಸುತ್ತಿರುವುದಾಗಿ ಮೂಲಗಳು ತಿಳಿಸಿದ್ದು, ಇದನ್ನು 2024 ರ ಲೋಕಸಭೆ ಚುನಾವಣೆಯ ನಂತರ ಘೋಷಿಸುವ ಸಾಧ್ಯತೆಯಿದೆ.

     ವಿಜಯ್ ಅವರು ತಮ್ಮ ಅಭಿಮಾನಿ ಸಂಘ ಗಳಿಸಿದ ಅಭಿಮಾನವನ್ನು ತಮ್ಮ ರಾಜಕೀಯ ಪಕ್ಷಕ್ಕೆ ಮತವಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಸ್ಪಷ್ಟವಾದ ಪ್ಲ್ಯಾನ್ ಸಹ ರೆಡಿಯಾಗಿದೆ ಎಂದು ಮೂಲವೊಂದು ತಿಳಿಸಿದೆ. ವಿಜಯ್ ಅವರ ರಾಜಕೀಯ ಪ್ರವೇಶವು ತಮಿಳುನಾಡಿನಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಹುಟ್ಟಿಗೆ ಕಾರಣವಾಗುತ್ತದೆ. ಜೊತೆಗೆ ಜನಪ್ರತಿನಿಧಿಗಳ ಆಯ್ಕೆ ವಿಚಾರದಲ್ಲಿ ಜಾಗೃತಿ ಮೂಡಿಸಲು ಕಾರಣವಾಗುತ್ತೆ ಎಂದು ಎನ್.ಟಿ.ಕೆ ಮುಖ್ಯಸ್ಥ ಸೀಮಾನ್ ಅಭಿಪ್ರಾಯಪಟ್ಟಿದ್ದಾರೆ. ವಿಜಯ್ ಅವರು ರಾಜಕೀಯಕ್ಕೆ ಬರಬೇಕು ಎಂದು ಸೀಮಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

     ದಿವಂಗತ ಎಂ ಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರು ರಾಜಕೀಯದಲ್ಲಿ ಇತಿಹಾಸವನ್ನೇ ಸೃಷ್ಟಿ ಮಾಡಿದ್ರು. ಅಂದ್ರೆ ನಂತ್ರ ಬಂದ ವಿಜಯಕಾಂತ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲಿ ಸೃಷ್ಟಿಸಿದ ಇತಿಹಾಸವನ್ನು ರಾಜಕೀಯದಲ್ಲಿ ಸೃಷ್ಟಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ರೆ ವಿಜಯ್ ಕಳೆದ ಕೆಲವು ವರ್ಷಗಳಿಂದ ತಮ್ಮ ರಾಜಕೀಯ ಪ್ರವೇಶದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದ್ದಾರೆ. ತಮ್ಮ ಚಲನಚಿತ್ರಗಳ ಆಡಿಯೊ ಬಿಡುಗಡೆ ಕಾರ್ಯಕ್ರಮಗಳಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಇದರ ಜೊತೆ ತಮ್ಮ ಅಭಿಮಾನಿಗಳಿಗೆ 2021 ಮತ್ತು 2022 ರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸೋದಕ್ಕೂ ಅವಕಾಶ ಮಾಡಿಕೊಟ್ಟರು.

     2022 ರಲ್ಲಿ ತಮ್ಮ ಚಿತ್ರ ಮೃಗ ಬಿಡುಗಡೆಯಾಗುವ ಸಂದರ್ಭದಲ್ಲಿ, ರಾಜಕೀಯಕ್ಕೆ ಬರುವುದನ್ನು ನನ್ನ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಹೇಳಿದ್ದರು. ಈ 30 ವರ್ಷಗಳಲ್ಲಿ ನನ್ನನ್ನು ಸಾಮಾನ್ಯ ನಟನಿಂದ ದಳಪತಿಯನ್ನಾಗಿ ಮಾಡಿದ್ದು ಅಭಿಮಾನಿಗಳು. ಇದನ್ನು ಸಹ ಅಭಿಮಾನಿಗಳು ನಿರ್ಧರಿಸಬೇಕು ಎಂದು ಹೇಳಿದ್ದರು. ನೀವು ನನ್ನನ್ನು ಕೇಳಿದರೆ, ನಾನು ವಿಜಯ್ ಆಗಲು ಇಷ್ಟಪಡುತ್ತೇನೆ. ಆದರೆ ಅಭಿಮಾನಿಗಳು ಮತ್ತು ಸಂದರ್ಭಗಳ ಮೇಲೆ ನಿರ್ಧರಿತವಾಗಿರುತ್ತೆ ಎಂದು ಹೇಳಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap