ರೇಣುಕಾ ಸ್ವಾಮಿ ಮರ್ಡರ್‌ ಕೇಸ್‌ : ದಾಸನ ಬೇಲ್‌ ಪೆಟಿಷನ್‌ : ನಾಳೆಗೆ ಮುಂದೂಡಿಕೆ

ಬೆಂಗಳೂರು :

    ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ. ಈ ಹಿಂದೆ ಕೆಲವು ಬಾರಿ ಅರ್ಜಿ ವಿಚಾರಣೆ ವಿವಿಧ ಕಾರಣಗಳಿಗೆ ಮುಂದೂಡಲಾಗಿತ್ತು. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಹಿರಿಯ ವಕೀಲ ಸಿಎನ್ ನಾಗೇಶ್ ಅವರು ಇಂದು ದರ್ಶನ್ ಪರ ವಾದ ಮಂಡಿಸಿದರು. ಕಳೆದ ಎರಡು ವಾರದಿಂದಲೂ ದರ್ಶನ್​ಗೆ ಜಾಮೀನು ಅರ್ಜಿ ಮುಂದೂಡಿಕೆ ಆಗುತ್ತಲೇ ಬಂದಿದ್ದು, ಇಂದು ಕೊನೆಗೂ ಸಿವಿ ನಾಗೇಶ್ ಅವರು ದರ್ಶನ್ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ದಿನದ ಅಂತ್ಯಕ್ಕೆ ಪ್ರಕರಣದ ವಿಚಾರಣೆಯನ್ನು ನಾಳೆ (ಅಕ್ಟೋಬರ್ 05) ಮಧ್ಯಾಹ್ನ 12:30ಕ್ಕೆ ಮುಂದೂಡಿಕೆ ಮಾಡಲಾಯ್ತು.

   
    ಪ್ರಕರಣಕ್ಕೆ ಸಂಬಂಧಿಸಿದಂತೆ ವಾದದ ಟಿಪ್ಪಣಿ ಸಲ್ಲಿಸಿದ ನಾಗೇಶ್ ಅವರು ಆ ಬಳಿಕ ಎರಡು ಸುಪ್ರೀಂ ಕೋರ್ಟ್​ನ ಆದೇಶಗಳನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು. ಇಂದು ಸಿವಿ ನಾಗೇಶ್​ ಅವರು ದೀರ್ಘವಾಗಿ ವಾದ ಮಂಡನೆ ಮಾಡಿದರು. ಆರಂಭದಲ್ಲಿ ಮಾಧ್ಯಮಗಳ ವಿಚಾರ, ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ನ್ಯಾಯಾಲಯದ ಗಮನ ಸೆಳೆದ ವಕೀಲರು, ಮಾಧ್ಯಮಗಳ ವರದಿ ಆಧಾರದಲ್ಲಿ ತೀರ್ಪು ನೀಡಬಾರದೆಂದು ಮನವಿ ಮಾಡಿದರು. ಬಳಿಕ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿರುವ ವೈರುಧ್ಯಗಳ ಬಗ್ಗೆ ಗಮನ ಸೆಳೆದರು. ಜೊತೆಗೆ ಸುಪ್ರೀಂ ಕೋರ್ಟ್​ನ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ, ಪೊಲೀಸರು ತನಿಖೆಯ ವೇಳೆ ವಶಪಡಿಸಿಕೊಂಡಿರುವ ವಸ್ತುಗಳನ್ನು ಗಂಭೀರವಾಗಿ ಅಂದರೆ ಸಾಕ್ಷಿಗಳೆಂದು ಪರಿಗಣಿಸುವ ಅಗತ್ಯವಿಲ್ಲವೆಂದು ವಾದಿಸಿದರು.
 
    ಸಿವಿ ನಾಗೇಶ್ ಅವರ ಸುದೀರ್ಘ ವಾದವನ್ನು ಆಲಿಸಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 04ರ ಮಧ್ಯಾಹ್ನ 12:30ಗೆ ಮುಂದೂಡಿಕೆ ಮಾಡಿದರು. ನಾಳೆಯೂ ಸಹ ಸಿವಿ ನಾಗೇಶ್ ಅವರ ವಾದ ಮುಂದುವರೆಯಲಿದ್ದು, ಅದಾದ ಬಳಿಕ ಪ್ರಸನ್ನ ಅವರ ಆಕ್ಷೇಪಣೆ ಸಹ ಇರುವ ಸಾಧ್ಯತೆ ಇದೆ. ಆ ಬಳಿಕ ನ್ಯಾಯಾಧೀಶರು ಜಾಮೀನು ಅರ್ಜಿ ಕುರಿತಂತೆ ತೀರ್ಪು ನೀಡಲಿದ್ದಾರೆ.

Recent Articles

spot_img

Related Stories

Share via
Copy link
Powered by Social Snap