ಹುಳಿಯಾರು:
ಹುಳಿಯಾರು ಹೋಬಳಿ ಕೆಂಕೆರೆ ಗ್ರಾಪಂ ವ್ಯಾಪ್ತಿಯ ಕೆ.ಸಿ.ಪಾಳ್ಯ ಗ್ರಾಮದಲ್ಲಿ ಮೊನ್ನೆ ಸುರಿದ ಭಾರಿ ಮಳೆಗೆ ಮನೆ ಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಇಲ್ಲಿನ ಶಾರದಮ್ಮ ಸೋಮಶೇಖರ್ ಅವರ ಮನೆಯ 2 ಗೋಡೆಗಳು ಕುಸಿದಿದ್ದು, ಮನೆಯಲ್ಲಿ ಶೋಭಾಮಣಿಕಂಠ ಎಂಬುವವರು ಬಾಡಿಗೆ ಇದ್ದರು. ಕಳೆದ 5-6 ದಿನಗಳಿಂದ ಭಾರಿ ಮಳೆಯಾಗುತ್ತಿರುವುದರಿಂದ ಮಳೆಯ ನೀರಿಗೆ ಮನೆ ಗೋಡೆ ನೆನೆದು ಶಿಥಿಲವಾಗಿತ್ತು.
ಸೋಮವಾರ ರಾತ್ರಿಯಿಡಿ ಭಾರಿ ಮಳೆಯಾಗಿದ್ದರಿಂದ ಮಂಗಳವಾರ ಬೆಳಗ್ಗೆ ಮನೆಯ ಎರಡೂ ಗೋಡೆಗಳು ಕುಸಿದಿವೆ. ಗೋಡೆ ಕುಸಿಯುವುದನ್ನು ಅರಿತ ವಾಸಿಗಳು ಮನೆಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೇ ಗೋಡೆ ಕುಸಿತದಿಂದ ಮನೆಯಲ್ಲಿದ್ದ ದವಸ-ಧಾನ್ಯ, ಪಾತ್ರೆ, ಬಟ್ಟೆ ಸೇರಿದಂತೆ ಅನೇಕ ಗೃಹಪಯೋಗಿ ವಸ್ತುಗಳು ಜಖಂ ಆಗಿ ಅಪಾರ ನಷ್ಟವಾಗಿದೆ. ಶೋಭಾ ಅವರಿಗೆ ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಈಗ ಮನೆ ಮತ್ತು ಮನೆಯ ವಸ್ತುಗಳನ್ನು ಕಳೆದುಕೊಂಡಿರುವ ಇವರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಗಮನ ಹರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
