ವಯನಾಡು ಭೂಕುಸಿತ : 158ಕ್ಕೇರಿದ ಸಾವಿನ ಸಂಖ್ಯೆ….!

ವಯನಾಡು:

    ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 158ಕ್ಕೆ ಏರಿಕೆಯಾಗಿದೆ. 211 ಜನರು ನಾಪತ್ತೆ ಕುರಿತು ವರದಿಯಾಗಿದೆ. ನೂರಾರು ಜನರು ಗಾಯಗೊಂಡಿದ್ದು, ಸಾವಿರಾರು ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ನೂರಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಉಳಿದಿರುವವರ ರಕ್ಷಣೆಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಇಂದು ಬೆಳಗ್ಗೆಯಿಂದ ಪುನರಾರಂಭಿಸಿವೆ. ಕಗ್ಗತ್ತಲು ಹಾಗೂ ಹವಾಮಾನ ವೈಫರೀತ್ಯದಿಂದಾಗಿ ಮಂಗಳವಾರ ತಡರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.

    ಸೇನಾ ಸಿಬ್ಬಂದಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇದುವರೆಗೆ ಸುಮಾರು 70 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸುಮಾರು 1,000 ಜನರನ್ನು ರಕ್ಷಿಸಲಾಗಿದೆ ಎಂದು ಸೇನೆ ಹೇಳಿದೆ. ಸಂತ್ರಸ್ತರಿಗೆ ನಿರ್ಣಾಯಕ ನೆರವು ನೀಡಲು ಹಲವಾರು ರಕ್ಷಣಾ ತಂಡಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಸೇನೆ, ನೌಕಾಪಡೆ ಮತ್ತು ಎನ್‌ಡಿಆರ್‌ಎಫ್‌ ಸಿಬ್ಬಂದಿ ಭೂಕುಸಿತದಿಂದ ಬದುಕುಳಿದವರಿಗಾಗಿ ಕುಸಿದ ಮೇಲ್ಛಾವಣಿ ಮತ್ತು ಅವಶೇಷಗಳಡಿಯಲ್ಲಿ ಹುಡುಕುತ್ತಿದ್ದಾರೆ.

   ಭೂಕುಸಿತದಿಂದ ನೆಲಸಮವಾದ ಮುಂಡಕ್ಕೈ ಕುಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡಾಗ, ಮನೆಗಳ ಒಳಗೆ ಕುಳಿತಿರುವ ಮತ್ತು ಮಲಗಿರುವ ಸ್ಥಿತಿಯಲ್ಲಿ ಮೃತ ದೇಹಗಳ ಭಯಾನಕ ದೃಶ್ಯಗಳು ಕಂಡುಬಂದವು. ಸೇನೆಯ ವಿವಿಧ ತುಕಡಿಗಳು ಸಂಪರ್ಕ ಕಡಿತಗೊಂಡ ಪ್ರದೇಶಗಳಿಗೆ ಇಂದು ತೆರಳಿದ್ದಾರೆ.

   ತಿರುವನಂತಪುರಂ ಮತ್ತು ಬೆಂಗಳೂರಿನಿಂದ ಕ್ಯಾಲಿಕಟ್‌ಗೆ ರಸ್ತೆ ಮತ್ತು ವಿಮಾನದ ಮೂಲಕ ಸ್ಥಳಾಂತರಗೊಂಡಿವೆ. ವಿಪತ್ತು ಪರಿಹಾರ, ವೈದ್ಯಕೀಯ ತಂಡಗಳು, ಆಂಬ್ಯುಲೆನ್ಸ್‌ಗಳು ಮತ್ತು ಇತರ ಉಪಕರಣಗಳಲ್ಲಿ ಅನುಭವಿಗಳನ್ನು ಈ ಸೇನೆ ಒಳಗೊಂಡಿವೆ ಎಂದು ರಕ್ಷಣಾ ಹೇಳಿಕೆ ತಿಳಿಸಿದೆ. ಅವಶೇಷಗಳಡಿಯಲ್ಲಿ ಇನ್ನೂ ಹಲವಾರು ಜನರು ಸಿಲುಕಿದ್ದು, ಸಾವು- ನೋವಿನ ಪ್ರಮಾಣ ಹೆಚ್ಚಾಗುವ ಆತಂಕವಿದೆ.

    ಬಹುತೇಕ ಎಲ್ಲಾರು ನಿದ್ರಿಸುತ್ತಿರುವಾಗ ಮಧ್ಯರಾತ್ರಿ 1:30 ರಿಂದ 4 ಗಂಟೆಯ ನಡುವೆ ಭೂಕುಸಿತ ಸಂಭವಿಸಿದ್ದು, ಬೃಹತ್ ಬಂಡೆಗಳು ಮತ್ತು ಬೇರುಸಹಿತ ಮರಗಳು ಮುಂಡಕ್ಕೈನಿಂದ ಚೂರಲ್ಮಲಾಗೆ ನುಗ್ಗಿ ತೀವ್ರ ಹಾನಿಯನ್ನುಂಟುಮಾಡಿವೆ. ಬೆಟ್ಟದ ತುದಿಯಿಂದ ಭಾರೀ ನೀರು ಬಂದ್ದರಿಂದ ಸಣ್ಣ ಇರುವಝಿಂಜಿ ನದಿ ಪ್ರವಾಹದಲ್ಲಿ ಉಕ್ಕಿ ಹರಿದಿದೆ. ಹಲವಾರು ಮನೆಗಳು ಧ್ವಂಸಗೊಂಡಿವೆ. ಒಂದು ದೇವಾಲಯ ಮತ್ತು ಮಸೀದಿ ಮುಳುಗಡೆಯಾಗಿದೆ ಮತ್ತು ಶಾಲಾ ಕಟ್ಟಡವು ತೀವ್ರವಾಗಿ ಹಾನಿಗೊಳಗಾಗಿದೆ. ವಯನಾಡಿನಲ್ಲಿ 45 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 3,069 ಜನರಿಗೆ ವಸತಿ ಕಲ್ಪಿಸಲಾಗಿದೆ.

    ಈ ಮಧ್ಯೆ ಅತಿ ಹೆಚ್ಚು ಮಳೆಯ ಕಾರಣ ವಯನಾಡ್, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಯನಾಡ್, ಉತ್ತರ ಕೇರಳದ ಗುಡ್ಡಗಾಡು ಜಿಲ್ಲೆಯಾಗಿದ್ದು, ಹಚ್ಚ ಹಸಿರಿನ ಕಾಡುಗಳು, ಬೆಟ್ಟಗಳು ಮತ್ತು ಹೊಳೆಯುವ ಜಲಪಾತಗಳಿಗೆ ಹೆಸರುವಾಸಿಯಾಗಿದೆ.

    ಸುಮಾರು 8,17,000 ಜನಸಂಖ್ಯೆಯೊಂದಿಗೆ ಸ್ಥಳೀಯ ಬುಡಕಟ್ಟು ಸಮುದಾಯಗಳನ್ನು ಒಳಗೊಂಡಂತೆ ವಿವಿಧ ಸಂಸ್ಕೃತಿಗಳಿಗೆ ನೆಲೆಯಾಗಿದೆ. ಮಂಗಳವಾರದ ದುರಂತವು 2018 ರ ಪ್ರವಾಹದ ನಂತರ ಕೇರಳದಲ್ಲಿ ಸಂಭವಿಸಿದ ಅತ್ಯಂತ ವಿನಾಶಕಾರಿ ಘಟನೆಯಾಗಿದೆ. ಇದು ಸುಮಾರು 500 ಜನರನ್ನು ಬಲಿ ತೆಗೆದುಕೊಂಡು, ರಾಜ್ಯದ ‘ಶತಮಾನದ ಪ್ರವಾಹ’ ಎಂದು ಕರೆಯಲ್ಪಟ್ಟಿದೆ.

Recent Articles

spot_img

Related Stories

Share via
Copy link