ಕೃಷಿ ಕಾಯ್ದೆಗಳು ರದ್ದಾಗುವವರೆಗೂ ಹೋರಾಟ ನಿಲ್ಲದು

ಹುಳಿಯಾರು:

ಮೂರು ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಆದರೆ, ಕಾಯ್ದೆಗಳು ರದ್ದಾಗುವವರೆಗೂ ಹೋರಾಟ ನಿಲ್ಲದು ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ತಿಳಿಸಿದ್ದಾರೆ.
ಹುಳಿಯಾರು ಎಪಿಎಂಸಿ ಆವರಣದಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಈ ಕಾಯ್ದೆಗಳನ್ನು ಜಾರಿಗೆ ತರಲಾಗಿದ್ದು, ಕೂಡಲೇ ರದ್ದು ಪಡಿಸುವಂತೆ ಆಗ್ರಹಿಸಿ ನ.26 ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪರಿಹಾರಕ್ಕೆ ಒತ್ತಾಯ :

ಜಾನುವಾರು ಪ್ರತಿಬಂಧಕ ಕಾಯ್ದೆ, ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನೂ ಹಿಂಪಡೆಯಬೇಕು. ಕೃಷಿಗೆ ಸಂಬಂಧಿಸಿದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಆದರೆ, ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಅತಿವೃಷ್ಟಿಯಿಂದ ಹಾನಿಕೊಳಗಾದ ಬೆಳೆಗಳಿಗೆ ಮಾರುಕಟ್ಟೆಯ ದರಕ್ಕೆ ತಕ್ಕಂತೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.ರೈತ ಸಂಘದ ತಿಮ್ಮನಹಳ್ಳಿ ಲೋಕಣ್ಣ, ಪ್ರಕಾಶ್, ಮರುಳಪ್ಪ, ದಾಸಪ್ಪ ಸೇರಿದಂತೆ ಅನೇಕ ರೈತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸರಣಿ ಹೋರಾಟದ ಎಚ್ಚರಿಕೆ :

ರಾಜ್ಯ ಸರ್ಕಾರ ಈ ಕಾಯ್ದೆಯ ಮುಖ್ಯ ಅಂಶಗಳಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ತಂದು ಭಾರೀ ವೇಗವಾಗಿ ಜಾರಿ ಮಾಡುತ್ತಿದೆ. ಕೇಂದ್ರದ ನಿರ್ಧಾರದಂತೆಯೆ ರಾಜ್ಯದ ಮುಖ್ಯಮಂತ್ರಿ ಸಹ ಕೂಡಲೆ ಅಧಿವೇಶನ ಕರೆದು, ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ನ.26 ರ ನಂತರ ಸರಣಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕರಾಳ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ನರೇಂದ್ರಮೋದಿ ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ಭಾರಿ ದೊಡ್ಡ ವಿಜಯವಾಗಿದೆ. ಈ ಹೋರಾಟಕ್ಕೆ ಕಾರಣಿಭೂತರಾದ ಮಳೆ, ಚಳಿ, ಬಿಸಿಲು, ಬೆದರಿಕೆಗಳನ್ನು ಲೆಕ್ಕಿಸದೆ ದೆಹಲಿಯ ಗಡಿಗಳಲ್ಲಿ ಸತತ ಒಂದು ವರ್ಷದಿಂದ ಹೋರಾಟ ನಡೆಸಿದ ಲಕ್ಷಾಂತರ ರೈತರು ಹಾಗು ಇದರ ಭಾಗವಾಗಿ ದೇಶಾದ್ಯಂತ ವ್ಯಾಪಕ ಹೋರಾಟ ನಡೆಸಿದ ರೈತರು, ದಲಿತರು, ಕಾರ್ಮಿಕರು ಅಭಿನಂದನಾರ್ಹರು.

-ಕೆಂಕೆರೆ ಸತೀಶ್, ಉಪಾಧ್ಯಕ್ಷರು, ರಾಜ್ಯ ರೈತಸಂಘ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link