ಬೆಂಗಳೂರು:
ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಗರದ ಸಂಚಾರಿ ಪೊಲೀಸರು ಮುಂದಾಗಿದ್ದಾರೆ.ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುವವರ ವಾಹನ ಪರವಾನಗಿಯನ್ನು (ಡಿಎಲ್) ರದ್ದು ಮಾಡಲು ನಿರ್ಧಾರ ಕೈಗೊಂಡಿದ್ದಾರೆ.
ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ. ಈ ಹಿಂದೆ ಪಾದಚಾರಿ ಮಾರ್ಗದ ಮೇಲೆ ಗಾಡಿ ಓಡಿಸಿದರೆ ಸಂಚಾರಿ ಪೊಲೀಸರು ದಂಡ ಹಾಕುತ್ತಿದ್ದರು. ದಂಡ ವಿಧಿಸಿದರೂ ಸವಾರರು ಮಾತ್ರ ನಿಯಮ ಉಲ್ಲಂಘಿಸುವುದನ್ನು ಮುಂದುವರೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಕಠಿಣ ಕ್ರಮಕ್ಕೆ ಮುಂಂದಾಗಿದ್ದಾರೆ. ನಿಯಮ ಉಲ್ಲಂಘಿಸುವ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ ಮೊದಲ ಬಾರಿಗೆ ಸಿಕ್ಕಿಬಿದ್ದರೆ ದಂಡ ಹಾಕಲಾಗುತ್ತದೆ. ಮತ್ತೆ ಮತ್ತೆ ಸಿಕ್ಕಿಬಿದ್ದರೇ ಲೈಸೆನ್ಸ್ ಅಮಾನತು ಮಾಡುವಂತೆ ಸಂಚಾರಿ ಪೊಲೀಸರು ಶಿಪಾರಸ್ಸು ಮಾಡಲಿದ್ದಾರೆ.