ಲಂಚದ ಆಸೆಯಿಂದಲೇ ಮಂತ್ರಿ ಮಂಡಲ ವಿಸ್ತರಣೆ ಮಾಡಿಲ್ಲ : ಸಿದ್ದರಾಮಯ್ಯ

ಕಲಬುರಗಿ

    ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆ ಆದರೆ ಸಂಪುಟದಲ್ಲಿ ಯಡಿಯೂರಪ್ಪ ಅವರ ಮಗನಿಗೂ ಸಹ ಮಂತ್ರಿ ಗಿರಿ ಕೊಡಬೇಕಾಗುತ್ತದೆ ಎಂಬ ಭಯ ಒಂದು ಕಡೆಯಾದರೆ ಇನ್ನೊಂದು ಕಡೆ ಲಂಚ ಜಾಸ್ತಿ ಸಿಗುತ್ತೆ ಅಂತಲೇ ಒಂದೂವರೆ ವರ್ಷದಿಂದ ಸಂಪುಟ ವಿಸ್ತರಣೆ ಮಾಡದೆ ಸುಮಾರು ಇಲಾಖೆಗಳನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

    ನರೇಂದ್ರ ಮೋದಿ ಅವರು ನಾವು ಮಾಡಿದ ಕೆಲಸಗಳನ್ನೇ ಉದ್ಘಾಟನೆ ಮಾಡಲು ರಾಜ್ಯಕ್ಕೆ ಬರುತ್ತಿದ್ದಾರೆ. ಹೆಚ್.ಎ.ಎಲ್ ಅನ್ನು ಯು.ಪಿ.ಎ ಅವಧಿಯಲ್ಲಿ ಮಾಡಿದ್ದು ಅದನ್ನು ಉದ್ಘಾಟಿಸುತ್ತಿದ್ದಾರೆ.

     ಲಂಬಾಣಿ ಜನರಿಗೆ ಮೋದಿಯವರು ಹಕ್ಕುಪತ್ರ ನೀಡಿದ್ರು, ಆ ಕಾನೂನನ್ನು ಮಾಡಿದ್ದು ನಮ್ಮ ಸರ್ಕಾರ. ನಾನು ಮುಖ್ಯಮಂತ್ರಿ ಆಗಿದ್ದಾಗ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ವಾಸಿಸುವನೆ ಮನೆಯೊಡೆಯ ಎಂಬ ಕಾಯ್ದೆ ತಂದವರು ನಾವು. ನಾನು ಒಂದು ಸಮಿತಿ ಮಾಡಿ, ಅಧಿಕಾರಿಯನ್ನು ನೇಮಿಸಿ, ಅವರಿಂದ ವರದಿ ಪಡೆದು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ನಾವು ಅಡುಗೆ ಮಾಡಿದ್ವಿ, ಮೋದಿ ಅವರು ಬಂದು ಬಡಿಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link