ಇಂದಿನಿಂದ 14 ಕ್ಷೇತ್ರಗಳಿಗೆ ನಾಮ ಪತ್ರ ಸಲ್ಲಿಕೆ ….!

ಬೆಂಗಳೂರು:

   ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂದ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.

   ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ. ಜೂ.4ರಂದು ಫಲಿತಾಂಶ ಹೊರಬೀಳಲಿದೆ. 

   ಇಂದು ನಾಮಪತ್ರ ಸಲ್ಲಿಕೆಯಾಗುವ 14 ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಕೂಟ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು, ಒಟ್ಟಾಗಿಯೇ ಚುನಾವಣೆ ಎದುರಿಸಲಿದೆ. ಬಿಜೆಪಿ ಪಾಲಿಗೆ ಬಂದ 11 ಕ್ಷೇತ್ರಗಳ ಅಭ್ಯರ್ಥಿಗಳು ಆಖೈರುಗೊಂಡಿದ್ದು, ತನ್ನ ಪಾಲಿಗೆ ಸಿಕ್ಕಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್‌ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ.

   ಈ ನಡುವೆ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಹೊರತುಪಡಿಸಿ ಉಳಿದ 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಘೋಷಿಸಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯುವ  ಲೋಕಸಭಾ ಕ್ಷೇತ್ರಗಳು 

    • ಉಡುಪಿ – ಚಿಕ್ಕಮಗಳೂರು
    • ಹಾಸನ
    • ದಕ್ಷಿಣ ಕನ್ನಡ
    • ಚಿತ್ರದುರ್ಗ (ಎಸ್‌ಸಿ)
    • ತುಮಕೂರು
    • ಮಂಡ್ಯ
    • ಮೈಸೂರು
    • ಚಾಮರಾಜನಗರ (ಎಸ್‌ಸಿ)
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ಉತ್ತರ
    • ಬೆಂಗಳೂರು ಕೇಂದ್ರ
    • ಬೆಂಗಳೂರು ದಕ್ಷಿಣ
    • ಚಿಕ್ಕಬಳ್ಳಾಪುರ
    • ಕೋಲಾರ (ಎಸ್‌ಸಿ)

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap