ಡಾ.ಉಮೇಶ್ ಜಾಧವ್ ಬಲಗೈ ಭಂಟನ ಬರ್ಬರ ಹತ್ಯೆ….!

ಕಲಬುರಗಿ:

     ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಬರ್ಬರ ಹತ್ಯೆಯ ಬೆನ್ನಲ್ಲೇ ಇದೀಗ ಮತ್ತೊಂದು ಜಿಲ್ಲೆಯಲ್ಲಿ ಮತ್ತೊಂದು ಕೊಲೆ ನಡೆದಿದೆ. ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ

    ಗಿರೀಶ್ ಬಾಬು ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿದೆ.

    ಇತ್ತೀಚೆಗಷ್ಟೇ ಗಿರೀಶ್ ಬಾಬು ಅವರನ್ನು ದೂರ ಸಂಪರ್ಕ ಇಲಾಖೆಯ ಕಲಬುರಗಿ ವಿಭಾಗದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿತ್ತು. ಹೀಗಾಗಿ ಆತನ ಸ್ನೇಹಿತರು ಪಾರ್ಟಿ ಕೊಡುವುದಾಗಿ ಜಮೀನಿಗೆ ಕರೆಸಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಕೊಲೆಗೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಹತ್ಯೆಗೈಯಲಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Recent Articles

spot_img

Related Stories

Share via
Copy link
Powered by Social Snap