ಸಹಾರಾ ಸಮೂಹದ ಸ್ಥಾಪಕ ವಿಧಿವಶ…..!

ವದೆಹಲಿ:

     ಸಹಾರಾ ಸಮೂಹದ  ಸ್ಥಾಪಕ ಸುಬ್ರತಾ ರಾಯ್  ದೀರ್ಘಕಾಲದ ಅನಾರೋಗ್ಯದ ನಂತರ ಮುಂಬೈನಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.

    ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಭಾನುವಾರ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಕೆಡಿಎಎಚ್) ದಾಖಲಿಸಲಾಗಿತ್ತು.ಆದರೇ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿರೋದಾಗಿ ತಿಳಿದು ಬಂದಿದೆ.

    ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವಂತ ಸಹಾರಾ ಇಂಡಿಯಾ ಪರಿವಾರ್ ನಮ್ಮ ಗೌರವಾನ್ವಿತ ‘ಸಹರಾಶ್ರೀ’ ಸುಬ್ರತಾ ರಾಯ್ ಸಹಾರಾ ಅವರ ನಿಧನದ ಬಗ್ಗೆ ಸಹಾರಾ ಇಂಡಿಯಾ ಪರಿವಾರ್ ತೀವ್ರ ದುಃಖದಿಂದ ತಿಳಿಸುತ್ತಿದೆ. ಸ್ಪೂರ್ತಿದಾಯಕ ನಾಯಕ ಮತ್ತು ದೂರದೃಷ್ಟಿಯ ಸಹರಾಶ್ರೀ ಜಿ ಅವರು ಮೆಟಾಸ್ಟಾಟಿಕ್ ಕ್ಯಾನ್ಸರ್, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಉಂಟಾಗುವ ತೊಡಕುಗಳೊಂದಿಗೆ ದೀರ್ಘಕಾಲದ ಹೋರಾಟದ ನಂತರ ಹೃದಯ ಸ್ತಂಭನದಿಂದಾಗಿ 2023 ರ ನವೆಂಬರ್ 14 ರಂದು ರಾತ್ರಿ 10.30 ಕ್ಕೆ ನಿಧನರಾದರು ಎಂದು ತಿಳಿಸಿದೆ.

    ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದ ಸುಬ್ರತಾ ರಾಯ್ ಹಣಕಾಸು, ರಿಯಲ್ ಎಸ್ಟೇಟ್, ಮಾಧ್ಯಮ ಮತ್ತು ಆತಿಥ್ಯ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ವ್ಯಾಪಿಸಿದ ವಿಶಾಲ ಸಾಮ್ರಾಜ್ಯವನ್ನು ಸ್ಥಾಪಿಸಿದರು.

    ಸುಬ್ರತಾ ರಾಯ್ ಗೋರಖ್ಪುರದ ಸರ್ಕಾರಿ ತಾಂತ್ರಿಕ ಸಂಸ್ಥೆಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದರು. ನಂತರ ಅವರು 1976ರಲ್ಲಿ ಸಹಾರಾ ಫೈನಾನ್ಸ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಮೊದಲು ಗೋರಖ್ಪುರದಲ್ಲಿ ವ್ಯವಹಾರಕ್ಕೆ ಕಾಲಿಟ್ಟರು.

    1978 ರ ಹೊತ್ತಿಗೆ, ಅವರು ಅದನ್ನು ಸಹಾರಾ ಇಂಡಿಯಾ ಪರಿವಾರ್ ಆಗಿ ಪರಿವರ್ತಿಸಿದರು. ಇದು ಭಾರತದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಸಹಾರಾ ಸಮೂಹವು 1992ರಲ್ಲಿ ರಾಷ್ಟ್ರೀಯ ಸಹಾರಾ ಎಂಬ ಹಿಂದಿ ಭಾಷೆಯ ಪತ್ರಿಕೆಯನ್ನು ಪ್ರಾರಂಭಿಸಿತು ಮತ್ತು ನಂತರ ಸಹಾರಾ ಟಿವಿಯೊಂದಿಗೆ ದೂರದರ್ಶನ ಕ್ಷೇತ್ರವನ್ನು ಪ್ರವೇಶಿಸಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap