ಶತ್ರು ಭೈರವಿ ಯಾಗ ಕೆಲಸ ಮಾಡಿಲ್ಲ : HDK

ಬೆಂಗಳೂರು:

     ಜನರ ಹಾಗೂ ಜೆಡಿಎಸ್-ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಎನ್‌ಡಿಎ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದರು.

    ಮಂಡ್ಯ ಲೋಕಸಭೆ ಫಲಿತಾಂಶದ ಬಳಿಕ ಪಕ್ಷದ ಕಚೇರಿಗೆ ಭೇಟಿ ನೀಡಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂದು ತಿರುಗೇಟು ಕೊಟ್ಟರು.

    ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಅವರಿಗೂ ಕುಟುಕಿದರು. 

Recent Articles

spot_img

Related Stories

Share via
Copy link
Powered by Social Snap