ಬೆಂಗಳೂರು:
ಹಿರಿಯ ನಟ ಅನಂತ್ ನಾಗ್ ಕೊನೆಯ ಕ್ಷಣಕ್ಕೆ ಮನಸ್ಸು ಬದಲಿಸಿದ್ದಾರ ಎಂಬ ಅನುಮಾನ ಮೂಡಿದೆ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಅನಂತ್ ನಾಗ್ ಅವರು ಫೆ.22ಕ್ಕೆ ಸಂಜೆ ಬೆಂಗಳೂರಿನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿತ್ತು.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವರೆಂದು ಹೇಳಲಾಗಿತ್ತು. ಅವರ ಬರುವಿಕೆಗಾಗಿ ಪಕ್ಷದ ಕಚೇರಿಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಕಾದು ಕುಳಿತಿದ್ದರು. ಕಟೀಲ್ ನೇತೃತ್ವದಲ್ಲಿ ನಡೆದ ಪಕ್ಷ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರಿದರು ಆದರೆ ಕೊನೆ ಕ್ಷಣದಲ್ಲಿ ಅನಂತನಾಗ ಅವರು ಈ ಕಾರ್ಯಕ್ರಮಕ್ಕೆ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
90ರ ದಶಕದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಮತ್ತು ಜೆಎಚ್ ಪಟೇಲ್ ಗರಡಿಯಲ್ಲಿ ಪಳಗಿದ್ದ ಅವರು ಜನತಾದಳ ವಿಭಜನೆಯಾದ ಬಳಿಕ ರಾಜಕೀಯದಿಂದ ದೂರ ಉಳಿದು ಚಿತ್ರರಂಗದ ಕಡೆಗೆ ಮಾತ್ರ ಗಮನ ಹರಿಸಿದ್ದರು, ಜನತಾ ದಳದಿಂದ ರಾಜಕೀಯ ಪ್ರವೇಶ ಮಾಡಿದ್ದ ಅನಂತ್ ನಾಗ್ ನಂತರ ಚುನಾವಣೆಯಿಂದ ದೂರ ಉಳಿದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
