ಕಾಂಗ್ರೆಸ್‌ : ಘೋಷಿತ ಅಭ್ಯರ್ಥಿ ವಿರುದ್ಧ ಅಪಸ್ವರ…!

ಮಂಗಳೂರು:

     ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮುಂಚಿತವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದು ಕಾಂಗ್ರೆಸ್‌ಗೆ ತಿರುಗುಬಾಣವಾಗಿದೆ. ಅಭ್ಯರ್ಥಿ ಬದಲಿಸುವಂತೆ ಕಾರ್ಯಕರ್ತರು ಪಟ್ಟು ಹಿಡಿದು, ಪ್ರತಿಭಟನೆಗಿಳಿದಿದ್ದಾರೆ.

     ಸುಳ್ಯ ಮೀಸಲು ಕ್ಷೇತ್ರದ ಅಭ್ಯರ್ಥಿ ಜಿ ಕೃಷ್ಣಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿರುವುದು ಸುಳ್ಯದಲ್ಲಿ ಪಕ್ಷದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.  ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ತೆಗೆದುಕೊಳ್ಳದೆ  ಬೆಂಗಳೂರು ಮೂಲದ ಗ್ರಾನೈಟ್ ಉದ್ಯಮಿ ಕೃಷ್ಣಪ್ಪ ಅವರನ್ನು ಪಕ್ಷದ ಮುಖಂಡರು ಅಭ್ಯರ್ಥಿಯನ್ನಾಗಿ ಘೋಷಿಸಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

     ಸುಳ್ಯದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿ,  ಜಿ. ಕೃಷ್ಣಪ್ಪ  ಅವರ ಬದಲು ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ನಂದಕುಮಾರ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

     ಮತ್ತೊಂದೆಡೆ, ಕಡಬ ಬ್ಲಾಕ್ ಕಾಂಗ್ರೆಸ್‌ನ ಕೆಪಿಸಿಸಿ ಸಂಯೋಜಕರಾಗಿ ನೇಮಕಗೊಂಡ ನಂದಕುಮಾರ್ ಅವರು ಕಳೆದ ಐದು ವರ್ಷಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಸಹಾಯ ಮಾಡುವಲ್ಲಿ ಮತ್ತು ಪಕ್ಷವನ್ನು ಸಂಘಟಿಸುವಲ್ಲಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ, ಇದರ ಜೊತೆಗೆ  ಕೂಡ ಸುಳ್ಯದಲ್ಲಿ ನೆಲೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಮರ್ಥಿಸಿಕೊಂಡಿದ್ದಾರೆ. ನಂದಕುಮಾರ್ ಅವರಿಗೆ ಟಿಕೆಟ್ ನೀಡಿದರೆ ಈ ಭಾಗದಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಬಳ್ಳೇರಿ ಹೇಳಿದ್ದಾರೆ.

 

   ಹಾಲಿ ಶಾಸಕ ಮತ್ತು ಮೀನುಗಾರಿಕಾ ಸಚಿವ ಎಸ್ ಅಂಗಾರ ವಿರುದ್ಧ ಪಕ್ಷದಲ್ಲಿ ಸಾಕಷ್ಟು ಅಸಮಾಧಾನವಿದೆ.  ಜನರು ಈ ಬಾರಿ ಬದಲಾವಣೆಯನ್ನು ಬಯಸುತ್ತಿದ್ದು, ತಪ್ಪಾದ ಅಭ್ಯರ್ಥಿ ಆಯ್ಕೆಯಿಂದ ನಾವು ಸೋಲಬಹುದು ಎಂದು ಆತಂಕ ವ್ಯಕ್ತಪಡಿಸಿದರು.

   ಸುಳ್ಯದಲ್ಲಿ ಅಂಗಾರ ವಿಚಾರವಾಗಿ ಬಿಜೆಪಿ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯ ಮೂಡಿದೆ ಎಂದು ಮತ್ತೊಬ್ಬ ಕಾಂಗ್ರೆಸ್ ಕಾರ್ಯಕರ್ತ ಮಾಹಿತಿ ನೀಡಿದ್ದಾರೆ. ‘ಸ್ವಾಭಿಮಾನಿ ಬಿಜೆಪಿ’ ಎಂದು ಕರೆಯುವ ಒಂದು ಗುಂಪು ಅಂಗಾರ ಅವರು ಕಳೆದ 30 ವರ್ಷಗಳಲ್ಲಿ ಶಾಸಕರಾಗಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿಲ್ಲ ಹಾಗಿದ್ದರೂ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಡಲು  ಹೊರಟಿದೆ ಎಂದು  ವಿರೋಧ ವ್ಯಕ್ತಪಡಿಸಿದ್ದಾರೆ.

   ಅರಂತೋಡು, ಅಡ್ತಲೆ, ಅರಮನೆಗೆಯ, ಆಲೆಟ್ಟಿ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಂಗಾರ ವಿರುದ್ಧ ಭಿತ್ತಿಪತ್ರಗಳು ರಾರಾಜಿಸುತ್ತಿವೆ. ಕಾಂಗ್ರೆಸ್‌ನ ಮೊದಲ ಪಟ್ಟಿ ಪ್ರಕಟವಾದ ಬಳಿಕ ಸುಳ್ಯದಿಂದ ಪಕ್ಷದ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭ್ಯರ್ಥಿ ಬದಲಾವಣೆ ಕೋರಿತ್ತು. ಆದರೆ ಡಿಸಿಸಿ ಸಲ್ಲಿಸಿದ ವರದಿ ಆಧರಿಸಿ ಕೃಷ್ಣಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಿವಕುಮಾರ್ ಅವರಿಗೆ  ಮನವರಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap