ತುಮಕೂರು || ರಣ ರೋಚಕ ಬಿಸಿಲು: ಹೀಟ್ ಸ್ಟ್ರೋಕ್ ಆತಂಕ

ತುಮಕೂರು:

     ದಿನೇ ದಿನೇ ಏರುತ್ತಿರುವ ರಣ ರೋಚಕ‌ ಬಿಸಿಲಿನ ತಾಪಮಾನಕ್ಕೆ ಕಲ್ಪತರು ನಾಡು ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ ಕಾಡುತ್ತಿದೆ.ಈ ಆತಂಕದ ಬೆನ್ನಲ್ಲೇ ಜಿಲ್ಲಾಸ್ಪತ್ರೆ ಸೇರಿದಂತೆ, ತಾಲೂಕು ಅಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿಸಿದೆ.

    ಕಲ್ಪತರು ನಾಡಲ್ಲಿ ದಿನೇ ರಣ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ಪರಿಣಾಮ ಜನರಿಗೆ ಹೀಟ್ ಸ್ಟೋಕ್ ಆತಂಕ ಎದುರಾಗಿದೆ. ನಿತ್ಯ ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಯಾರಿಗಾದರೂ ಹೀಟ್ ಸ್ಟ್ರೋಕ್ ಕಂಡು ಬಂದಲ್ಲಿ ತಕ್ಷಣವೇ ಚಿಕಿತ್ಸೆ ನೀಡಲು ಪ್ರತ್ಯೇಕವಾಗಿ 5 ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಅಂತೆಯೇ ತಾಲೂಕು ಅಸ್ಪತ್ರೆಗಳಲ್ಲಿಯೂ ಪ್ರತ್ಯೇಕವಾಗಿ ಎರಡು ಹಾಸಿಗೆಗಳನ್ನ ಮೀಸಲಿರಿಸಲಾಗಿದೆ. ಜೊತೆಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳನ್ನು ಸಹ ಸಿದ್ಧತೆ ಮಾಡಿಕೊಂಡಿದೆ.

    ಸುಸ್ತು, ಆಯಾಸ ಎಂದು ಆಸ್ಪತ್ರೆಗೆ ಬರುವವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ‌‌. ಈವರೆಗೆ ಯಾವುದೇ ಹೀಟ್ ಸ್ಟ್ರೋಕ್ ಪ್ರಕರಣ ಜಿಲ್ಲೆಯಾದ್ಯಂತ ಕಂಡುಬಂದಿಲ್ಲ. ಆದರೆ ಏಪ್ರಿಲ್ ತಿಂಗಳಲ್ಲಿ ಬಿಸಿಲಿನಿಂದ ಸುಸ್ತಾಗಿ ಬಿದ್ದಂತಹ ಎರಡು ಪ್ರಕರಣ ಕಂಡುಬಂದಿತ್ತು. ಆದರೆ ಅದು ಹೀಟ್ ಸ್ಟ್ರೋಕ್ ಪ್ರಕರಣವಾಗಿರಲಿಲ್ಲ.

    ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ 36ರಿಂದ 38 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ರಣ ಬಿಸಿಲಿಗೆ ಜನ ಹೊರಬಾರದೆ ಪರದಾಡುತ್ತಿದ್ದಾರೆ‌. ಹೊಲ ಗದ್ದೆಗಳಲ್ಲಿ ಕೆಲಸ ಮಾಡುವವರು ಆಯಾಸವಾಗಿ ಬೀಳುತ್ತಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆತಲಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಹೀಟ್ ಸ್ಟ್ರೋಕ್ ಕಂಡುಬಂದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸಜ್ಜು ಮಾಡಿಕೊಳ್ಳಲಾಗಿದೆ.

    ರಣ ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ಆರೋಗ್ಯವೂ ಹದಗೆಟ್ಟಿದೆ. ಹೀಗಾಗಿ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಮುಂದೆ ಜನರು ಬೆಳಗ್ಗೆಯಿಂದಲೇ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಇಲಾಖೆಯಿಂದಲೂ ಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ ಎನ್ನುತ್ತಾರೆ ಜಿಲ್ಲಾವೈದ್ಯಾಧಿಕಾರಿ.

   ಸುಸ್ತು, ತಲೆ ಸುತ್ತು ಬರುವುದು, ಕೆಲಸ ಮಾಡಲು ಆಗದಿರುವುದು, ಸ್ನಾಯು ಸೆಳೆತ, ಜ್ವರ ಸೇರಿದಂತೆ ಇತರೆ ಸಮಸ್ಯೆಗಳಿಂದ ಜನ ಬಳಲುತ್ತಿದ್ದಾರೆ. ಇದೇ ಸಮಸ್ಯೆ ಹೊತ್ತು ಆಸ್ಪತ್ರೆಗಳಿಗೆ ಬರುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಗಂಭೀರವಾದ ಪ್ರಕರಣಗಳು ಕಾಣಿಸಿಕೊಳ್ಳುತ್ತಿಲ್ಲ.
    ಬಿಸಿಲಿನಿಂದ ಬೆವರುವುದು ಜಾಸ್ತಿಯಾಗುತ್ತದೆ. ಆರೋಗ್ಯ ಕಾಪಾಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ದೇಹದಲ್ಲಿ ನೀರಿನ ಸಮತೋಲನ ಕಾಯ್ದುಕೊಳ್ಳಬೇಕು. ನೀರು ಹೆಚ್ಚು ಕುಡಿಯಬೇಕು. ಎಳನೀರು ಸೇವನೆಗೆ ಒತ್ತು ಕೊಡಬೇಕು. ಮಧ್ಯಾಹ್ನದ ಹೊತ್ತಿನಲ್ಲಿ ಹೊರಗಡೆ ಬರಬಾರದು. ತೆಳುವಾದ ಬಟ್ಟೆ ಧರಿಸಬೇಕು. ಸುಸ್ತು, ಜ್ವರದ ಲಕ್ಷಣ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು’ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ‌.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap