ಟಿಕೆಟ್‌ ಹಂಚಿಕೆ ವೇಳೆ ಯಾರಿಗೂ ಅನ್ಯಾಯವಾಗಿಲ್ಲ : ಆರ್‌ ಅಶೋಕ್‌

ಬೆಂಗಳೂರು:

    ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ಒಕ್ಕಲಿಗರಿಗೆ ಯಾವುದೇ ಅನ್ಯಾಯ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಭಾನುವಾರ ಹೇಳಿದರು.

    ಬಿಜೆಪಿಯಲ್ಲಿ ಒಕ್ಕಲಿಗರನ್ನು ಕಡೆಗಣಿಸಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅಶೋಕ್ ಅವರು, ಇಲ್ಲಿಯವರೆಗೆ ಬಿಜೆಪಿ ಒಕ್ಕಲಿಗರನ್ನು ನ್ಯಾಯಯುತವಾಗಿ ನಡೆಸಿಕೊಂಡಿದೆ. ರಾಜ್ಯದಲ್ಲಿ ಇನ್ನೂ ಎಂಟು ಸ್ಥಾನಗಳಿಗೆ ಟಿಕೆಟ್ ಬಗ್ಗೆ ಪಕ್ಷವು ನಿರ್ಧರಿಸಿಲ್ಲ ಎಂದು ಹೇಳಿದರು 

Recent Articles

spot_img

Related Stories

Share via
Copy link
Powered by Social Snap