ಭಾರತ ವಿಶ್ವ ಗುರು ಆಗುವುದರಲ್ಲಿ ಸಂದೇಹವಿಲ್ಲ

ತುಮಕೂರು:


ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಜಾಗೃತಿವಹಿಸುವುದು ಮುಖ್ಯವಾಗಿದೆ. ಸಂಘಟನೆ ಮೂಲಕ ಸಂಸ್ಕಾರ ಕಲಿತಿರುವ ಬಿಜೆಪಿ ಸಮಾಜದಲ್ಲಿ ಸೇವಾ ಕಾರ್ಯಗಳನ್ನು ಮುಂದುವರಿಸಿದೆ, ದೇಶದಲ್ಲಿ ಮತ್ತೊಮ್ಮೆ ಎಲ್ಲ ತರಹದ ಪರಿಸ್ಥಿತಿಗಳ ಸುಧಾರಣೆ ಆಗಬೇಕೆಂಬುದು ಬಿಜೆಪಿಯ ಹಂಬಲ. ಇದು ದೇಶಕ್ಕೆ ಸೀಮಿತವಾಗದೆ ಇಡೀ ವಿಶ್ವವೇ ಭಾರತದತ್ತ ಮುಖ ಮಾಡಿದೆ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ಭಾರತ ಮತ್ತೊಮ್ಮೆ ವಿಶ್ವ ಗುರುವಾಗುವುದರಲ್ಲಿ ಸಂದೇಹವಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್‍ರವರು ಹೇಳಿದರು.

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಹಾಗೂ ಶ್ರೀದೇವಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ತಜ್ಞವೈದ್ಯರಿಂದ ಫ್ರೌಡಾವಸ್ಥೆ ಹಾಗೂ ಋತುಚಕ್ರ ಸ್ವಚ್ಛತೆ ಬಗ್ಗೆ ಅರಿವು ಕಾರ್ಯಾಗಾರವನ್ನು ಶ್ರೀದೇವಿ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಮಾರ್ಚ್ 10 ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ಹಿಂದಿನ ಕಾಲದಲ್ಲಿ ಮಹಿಳೆಯರು ಮನೆಯ ಹೊರಗೆ ಬಾರದಂತಹ ಕಾಲವಿತ್ತು, ಆದರೆ ಇಂದು ಮಹಿಳೆಯರು ಪುರುಷಗಿಂತ ಯಾವುದಕ್ಕೂ ಕಮ್ಮಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು. ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ್ಯವಾದ ಪಾತ್ರ ವಹಿಸಿದ ಮಹಿಳೆ ತಮ್ಮ ಮಕ್ಕಳಿಗೆ ಉತ್ತಮವಾದ ಭವಿಷ್ಯವನ್ನು ರೂಪಿಸಬಲ್ಲರು,

ಮಹಿಳೆಯರನ್ನು ಎಲ್ಲಾ ಸ್ಥಾನಗಳಲ್ಲಿಯೂ ಮೇಲಕ್ಕೆತ್ತಬೇಕು, ಆಕೆಗೆ ಪುರುಷರಷ್ಟೇ ಸಮಾನ ಅವಕಾಶಗಳನ್ನು ನೀಡಬೇಕು ಆಕೆಯ ಎಲ್ಲಾ ಸಾಧನೆಗಳನ್ನು ಗುರುತಿಸಬೇಕು ಎಂಬ ಉದ್ದೇಶದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುವುದು ಈ ಮೂಲಕ ಮಹಿಳೆಯರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಅಂಬಿಕಾ ಹುಲಿನಾಯ್ಕರ್ ರವರು ಮಾತನಾಡುತ್ತಾ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು ಎಂದು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ, ವಿಶ್ವ ಸಂಸ್ಥೆ ಹೇಳಿರುವ ಪ್ರಕಾರ ಮಹಿಳೆಯರು ಸಮಾಜದಲ್ಲಿ ಪುರುಷರಂತೆ ಸರಿಸಮಾನವಾಗಿ ಬೆಳೆಯಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶ್ರೀದೇವಿ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ.ರೇಖಾಗುರುಮೂರ್ತಿರವರು ಫ್ರೌಡಾವಸ್ಥೆ ಹಾಗೂ ಋತುಚಕ್ರ ಸ್ವಚ್ಛತೆ ಮತ್ತು ಅರಿವು ಬಗ್ಗೆ ವಿಷಯ ಮಂಡಿಸಿದರು.

ಕಾರ್ಯಕ್ರಮದಲ್ಲಿ ತುಮಕೂರು ಜಯನಗರ ಮಹಿಳಾ ಪೊಲೀಸ್ ಠಾಣೆಯ ಮಂಗಳಮ್ಮರವರಿಗೆ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸನ್ಮಾನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ತುಮಕೂರು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಲಕ್ಷ್ಮೀಶ್, ಮಹಿಳಾ ಮೋರ್ಚಾ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link