ಬೆಂಗಳೂರು:
ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದರೆ ಅದರಲ್ಲಿ ತಪ್ಪೇನು ಇಲ್ಲ, ಒಳ್ಳೆಯದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಇಂದು ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದ್ದಾರೆ.
ಬಿಹಾರ ಸರ್ಕಾರ ಬಿಹಾರದಲ್ಲಿ ಜಾತಿ ಗಣತಿ ವರದಿ ಪ್ರಕಟಿಸಿದ ಬೆನ್ನಲ್ಲೇ ಕರ್ನಾಟಕ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಕೇಳಿದಾಗ, ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಸಿದ ಬಳಿಕ ಚರ್ಚೆ ಮಾಡೋಣ ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಜಾತಿ ಗಣತಿ ನಡೆಸಲು ಅಂದಾಜು 100 ಕೋಟಿ ರೂಪಾಯಿಗೂ ಹೆಚ್ಚು ಖರ್ಚಾಗಿದೆ. ಇಷ್ಟು ಹಣ ಖರ್ಚು ಮಾಡಿ ವರದಿ ಬಿಡುಗಡೆ ಮಾಡದಿದ್ದರೇ ವ್ಯರ್ಥ ಆಗುವುದಿಲ್ಲವೇ, ಜಾತಿಗಣತಿ ಬಿಡುಗಡೆಯಾದರೆ ಒಳ್ಳೆಯದು ರಾಜ್ಯದಲ್ಲಿ ಮೀಸಲಾತಿ ಕೂಗು ಕೇಳಿಬಂದಿದೆ. ಸರ್ಕಾರ ದುಂದುವೆಚ್ಚಕ್ಕಾಗಿ ಜಾತಿ ಗಣತಿ ಮಾಡಿಲ್ಲ ಎಂದು ಹೇಳಿದರು.
![](https://prajapragathi.com/wp-content/uploads/2023/07/parameshwar.jpg)