ಹಾಸನ
ನಮ್ಮ ಪಕ್ಷದ ಸರ್ಕಾರ ಹೋದ ಮೇಲೆ ಹಾಸನದಲ್ಲಿ ನಮ್ಮ ಕಾರ್ಯಕರ್ತರನ್ನು ಯಾವ ರೀತಿ ನೋವು ಕೊಡುತ್ತಿದ್ದಾರೆ ನನಗೆ ಗೊತ್ತಿದೆ.ನಮ್ಮವರ ಮೇಲೆ ಸೆಕ್ಷನ್ 107 ಕೇಸ್ ಹಾಕುತ್ತಿದ್ದಾರೆ ಚುನಾವಣೆ ಸಮಯದಲ್ಲಿ ಗಲಾಟೆ ಮಾಡಿಸಿ ಜೈಲಿಗೆ ಕಳುಹಿಸುವುದು ಅಥವಾ ಗಡಿಪಾರು ಮಾಡಬೇಕು ಎಂದು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಆರೋಪಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರ ಮೇಲೆ ಸುಮೋಟೋ ಕೇಸ್ ಹಾಕುತ್ತಿದ್ದಾರೆ. ನಿನ್ನೆ ಉಗನೆ ಗ್ರಾಮಕ್ಕೆ ಹೋಗಿದ್ದೆ, ಅಲ್ಲಿ ಜನ ನಮಗೆ ರಕ್ಷಣೆ ಕೊಡಿ ಎನ್ನುತ್ತಿದ್ದರು. ಈ ಕ್ಷೇತವನ್ನು ನಾನು ಚಾಲೆಂಜ್ ಆಗಿ ತೆಗೆದುಕೊಂಡು ಯಾವ ರೀತಿ ಮಾಡಬೇಕು ಎನ್ನುವುದನ್ನು ನಮ್ಮ ಮುಖಂಡರುಗಳ ಜೊತೆ ಕುಳಿತು ಮಾತನಾಡಿ ಒಂದು ನಿರ್ಣಯಕ್ಕೆ ಬರಬೇಕಾಗುತ್ತದೆ ಎಂದರು.
ಹೆದರಿಕೊಂಡು ಓಡಿ ಹೋಗುವ ಪ್ರಶ್ನೆಯೇ ಇಲ್ಲ, ನೋಡೋಣ ಏನಾ ಗುತ್ತದೆ ಎಂದು. ನಮ್ಮ ಪಕ್ಷ ಏನು ತೀರ್ಮಾನ ಮಾಡುತ್ತದೆ ಎನ್ನುವುದನ್ನು ಕಾದು ನೋಡುತ್ತೇನೆ. ಕಳೆದ ಅರವತ್ತು ವರ್ಷದಿಂದ ದೇವೇ ಗೌಡರು ಈ ಮಟ್ಟಕ್ಕೆ ಬರಬೇಕಿದ್ದರೆ ನೀವೇ ಕಾರಣ. ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದೀರಿ. ದೇವೇಗೌಡರು ಹಾಗೂ ನಾನು ಈ ತಾಲೂಕಿಗೆ, ಜಿಲ್ಲೆಗೆ, ಹಾಸನ ನಗರಕ್ಕೆ ಏನು ಕೊಡುಗೆ ಕೊಟ್ಟಿದ್ದೇವೆ ಎನ್ನುವುದು ಒಂದು ಪರೀಕ್ಷೆ ಆಗಬೇಕಾಗುತ್ತದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/02/Untitled-6-33.jpg)