ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ : ಡಿ ಕೆ ಶಿವಕುಮಾರ್‌

ಬೆಂಗಳೂರು : 

     ಕರ್ನಾಟಕ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಣಕಣ ರಂಗೇರುತ್ತದ್ದು ಇದೀಗ ರಾಜಕೀಯ ನಾಯಕರುಗಳು ಆರೋಪ ಮತ್ತು ಪ್ರತ್ಯಾರೋಪಗಳಲ್ಲಿ ಮುಳುಗಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನನ್ನನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

    “ಬಿಜೆಪಿಯವರು ಅಧಿಕಾರ ದುರಪಯೋಗ, ಕುತಂತ್ರ ಮತ್ತು ಷಡ್ಯಂತ್ರ ಎಲ್ಲವನ್ನು ಮಾಡುತ್ತಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನಮಗೆ ಯಾರ ಅನುಕಂಪವೂ ನಮಗೆ ಬೇಡ,” ಎಂದು ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ