ಬಿಜೆಪಿ ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ : ಸಿದ್ದರಾಮಯ್ಯ

ಹುಬ್ಬಳ್ಳಿ:

     ಸಿ ಎನ್‌ ಅಶ್ವತ್‌ ನಾರಾಯಣ ಅವರು ನೀಡಿದ್ದ ಹೇಳಿಕೆ ವಿಚಾರವಾಗಿ ಸಿದ್ದರಾಮಯ್ಯ ಅವರನ್ನು ಕೇಳಿದರೆ ನಿಮ್ಮ ಪ್ರಶ್ನೆಯಲ್ಲಿಯೇ ಉತ್ತರವಿದೆ ಬಿಜೆಪಿಗರು ಎಂದೂ ನಾಡನ್ನು ಕಟ್ಟಿ ನೆಳೆಸಲು ಮುಂದಾದವರಲ್ಲ ಅವರದ್ದು ಬರಿ ಬೇರೆಯವರನ್ನು ನಾಶಮಾಡಿ ಆಳುವ ಸಂಸ್ಕೃತಿ ಹಾಗಿರುವಾಗ ನಮ್ಮ ಮುಂದಿನ ಗುರಿಯೊಂದೆ ಬಿಜೆಪಿಯನ್ನು ಸೋಲಿಸುವುದು. ಸಲ ಮತ್ತೆ ಅವರು ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ (ನಾಗರಿಕ ದಂಗೆ) ಶುರುವಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

  ಹುಬ್ಬಳ್ಳಿಯಲ್ಲಿ ಗುರುವಾರ ಸ್ಥಳೀಯ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್ಗೆ ಬರಮಾಡಿ ಕೊಂಡ ನಂತರ ಮಾತನಾಡಿದರು.ನೀವು ಜೆಡಿಎಸ್ ಬಿಟ್ಟು ಬಂದಿದ್ದು ಒಳ್ಳೆಯದಾಯಿತು. ಟಿಕೆಟ್ ಯಾರಿಗೇ ಸಿಕ್ಕರೂ ಅವರನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸುವುದು ಮುಖ್ಯ ಎಂದು ಹೇಳಿದರು.ಹೊಡಿ, ಬಡಿ, ಕಡಿ ಎನ್ನುವ ಮೂಲಕ ದೇಶದಲ್ಲಿ ಬಿಜೆಪಿಯವರು ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಸಾಮರಸ್ಯ ಹಾಳುಗೆಡವಿ ಅಶಾಂತಿ ಮೂಡಿಸುವುದೇ ಅವರ ಉದ್ದೇಶ. ದ್ವೇಷ ಕಕ್ಕುವ ಇಂತಹವರು ಇರಬೇಕಾ? ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap