ಮುಂಬೈ:
ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉದ್ಧವ್ ಠಾಕ್ರೆ ಪಾಳೆಯದ ಸದಸ್ಯ ಆದಿತ್ಯ ಠಾಕ್ರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಸರಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಅಜಿತ್ ಪವಾರ್, ಇತರ ಎಂಟು ಎನ್ಸಿಪಿ ಶಾಸಕರು ರಾಜ್ಯದ ಮೈತ್ರಿ ಸರಕಾರಕ್ಕೆ ಸೇರಿದ ನಂತರ ಶಿಂಧೆ ಅವರ ಮುಖ್ಯಮಂತ್ರಿ ಕುರ್ಚಿಗೆ ಅಪಾಯ ಎದುರಾಗಬಹುದು. “ರಾಜೀನಾಮೆ ನೀಡುವಂತೆ” ಶಿಂಧೆ ಅವರನ್ನು ಕೇಳಲಾಗಿದೆ ಎಂದು ಠಾಕ್ರೆ ಹೇಳಿದರು.
ಇತ್ತೀಚೆಗಷ್ಟೇ, ಎನ್ಸಿಪಿ ನಾಯಕ ಅಜಿತ್ ಪವಾರ್ ರಾಜ್ಯ ಸರಕಾರಕ್ಕೆ ಸೇರಿದಾಗಿನಿಂದ ಶಿಂಧೆ ಅವರ ಗುಂಪಿನ ಸುಮಾರು 20 ಶಾಸಕರು ತಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಶಿವಸೇನೆಯ (ಯುಬಿಟಿ) ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಅಜಿತ್ ಪವಾರ್ ಹಾಗೂ ಇತರ ಎನ್ಸಿಪಿ ನಾಯಕರು ಸರಕಾರಕ್ಕೆ ಸೇರಿದಾಗಿನಿಂದ ಶಿಂಧೆ ಪಾಳೆಯದ 17-18 ಶಾಸಕರು ನಮ್ಮನ್ನು ಸಂಪರ್ಕಿಸಿದ್ದಾರೆ” ಎಂದು ಸಂಜಯ್ ರಾವುತ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
