ನವದೆಹಲಿ:
ಹಣಕಾಸು ವರ್ಷವು ಮಾರ್ಚ್ 31 ರಂದು ಕೊನೆಗೊಳ್ಳಲಿದೆ. ಹೊಸ ಹಣಕಾಸು ವರ್ಷ ಏಪ್ರಿಲ್ 1 ರಿಂದ ಅನೇಕ ದೊಡ್ಡ ಬದಲಾವಣೆಗಳು ಸಂಭವಿಸಲಿವೆ. ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಗಳಿವೆ.
ಏಪ್ರಿಲ್ 1 ರಿಂದ ಟ್ರ್ಯಾಕ್ಗಳು, ಜಿಎಸ್ಟಿ, ಪ್ಯಾನ್-ಆಧಾರ್ ಲಿಂಕ್, ಎಫ್ಡಿ ಸೇರಿದಂತೆ ಬ್ಯಾಂಕ್ನ ನಿಯಮಗಳು ಬದಲಾಗುತ್ತವೆ.
ಹೀಗಾಗಿ ಅಂತಹ ಬದಲಾವಣೆಗಳ ಬಗ್ಗೆ ಅರಿತುಕೊಳ್ಳುವುದು ತುಂಬಾ ಅತ್ಯಗತ್ಯ. ಅವುಗಳು ಯಾವುವು ಎಂದು ಎಲ್ಲರೂ ತಿಳಿದುಕೊಂಡರೆ ಮುಂದಾಗುವ ಸಮಸ್ಯೆಗಳಿಗೆ ಇಂದಿನಿಂದಲೇ ಪರಿಹಾರವನ್ನು ಕಂಡುಕೊಳ್ಳಬಹುದು.
ಪ್ರಜಾಪ್ರಗತಿ ಯುಗಾದಿ ವಿಶೇಷಾಂಕ ಶುಭಕೃತಾದಿ ಬಿಡುಗಡೆ, ಸಚಿವ ಎಂಟಿಬಿ ಶಾಲಿನಿ ರಜನೀಶ್ ಸೇರಿ ಗಣ್ಯರ ಮೆಚ್ಚುಗೆ
ಪ್ಯಾನ್-ಆಧಾರ್ ಲಿಂಕ್ ಮಾಡುವುದು
ನೀವು ಮಾರ್ಚ್ 31, 2022 ರೊಳಗೆ ನಿಮ್ಮ ಆಧಾರ್ ಸಂಖ್ಯೆಯೊಂದಿಗೆ ನಿಮ್ಮ ಪಾನ್ ಕಾರ್ಡನ್ನು ಲಿಂಕ್ ಮಾಡದಿದ್ದರೆ, ನಿಮ್ಮ ಪಾನ್ ನಿಷ್ಕ್ರಿಯಗೊಳ್ಳುತ್ತದೆ ಮತ್ತು ಅದಕ್ಕಾಗಿ ನಿಮಗೆ ದಂಡವನ್ನು ವಿಧಿಸಲಾಗುತ್ತದೆ. ಆದರೆ, ದಂಡದ ಮೊತ್ತವನ್ನು ಸರ್ಕಾರ ಇನ್ನೂ ಪ್ರಕಟಿಸಿಲ್ಲ. ಇದನ್ನು ತಪ್ಪಿಸಲು ನಿಮ್ಮ ಪಾನ್ ಕಾರ್ಡನ್ನು ಆಧಾರ್ನೊಂದಿಗೆ ಲಿಂಕ್ ಮಾಡಿ.
ಪಿಎಫ್ ಖಾತೆಯ ಮೇಲಿನ ತೆರಿಗೆ
ಕೇಂದ್ರ ಸರ್ಕಾರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾನೂನುಗಳನ್ನು ಜಾರಿಗೆ ತರಲಿದೆ. ವಾಸ್ತವವಾಗಿ, ಏಪ್ರಿಲ್ 1 ರಿಂದ, ಅಸ್ತಿತ್ವದಲ್ಲಿರುವ ಪಿಎಫ್ ಖಾತೆಯನ್ನು ಎರಡು ಭಾಗಗಳಾಗಿ ವಿಂಗಡಿಸಬಹುದು. ಅದಕ್ಕೆ ತೆರಿಗೆ ವಿಧಿಸಲಾಗುತ್ತದೆ. ನಿಯಮಗಳ ಪ್ರಕಾರ, ಇಪಿಎಫ್ ಖಾತೆಯಲ್ಲಿ 2.5 ಲಕ್ಷ ರೂಪಾಯಿವರೆಗಿನ ತೆರಿಗೆ ಮುಕ್ತ ಕೊಡುಗೆಯ ಮಿತಿಯನ್ನು ವಿಧಿಸಲಾಗುತ್ತಿದೆ. ಇದಕ್ಕಿಂತ ಹೆಚ್ಚಿನ ಕೊಡುಗೆಯನ್ನು ನೀಡಿದರೆ, ಬಡ್ಡಿ ಆದಾಯಕ್ಕೆ ತೆರಿಗೆ ವಿಧಿಸಲಾಗುತ್ತದೆ.
ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರವರು ಪ್ರಜಾಪ್ರಗತಿ ಯುಗಾದಿ ವಿಶೇಷಾಂಕ ಬಿಡುಗಡೆ ಮಾಡಿ ಶುಭಹಾರೈಸಿದರು
ಆಕ್ಸಿಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಯಮಗಳಲ್ಲಿ ಬದಲಾವಣೆ
ಏಪ್ರಿಲ್ 1, 2022 ರಿಂದ ಆಕ್ಸಿಸ್ ಬ್ಯಾಂಕ್ನ ಸಂಬಳ ಅಥವಾ ಉಳಿತಾಯ ಖಾತೆಯಲ್ಲಿ ನಿಯಮಗಳು ಬದಲಾಗಲಿವೆ. ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಮಿತಿಯನ್ನು 10 ಸಾವಿರದಿಂದ 12 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿದೆ. ಅದೇ ಸಮಯದಲ್ಲಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಏಪ್ರಿಲ್ನಲ್ಲಿ PPS ಅನ್ನು ಜಾರಿಗೊಳಿಸುತ್ತಿದೆ. 10 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ಚೆಕ್ಗಳಿಗೆ ಏಪ್ರಿಲ್ 4 ರಿಂದ ಪರಿಶೀಲನೆಯನ್ನು ಕಡ್ಡಾಯಗೊಳಿಸಲಾಗಿದೆ.
ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಾಗಬಹುದು
ಪ್ರತಿ ತಿಂಗಳಂತೆ ಏಪ್ರಿಲ್ ಮೊದಲ ದಿನದಂದು ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಆಗಬಹುದು. ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಬೆಲೆಗಳು ಹೆಚ್ಚಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಏಪ್ರಿಲ್ನಲ್ಲಿ ಮತ್ತೊಮ್ಮೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗುವ ನಿರೀಕ್ಷೆ ಇದೆ.
ಔಷಧಿ ಬೆಲೆಗಳು ಹೆಚ್ಚಾಗಬಹುದು
ಮಾಧ್ಯಮ ವರದಿಗಳ ಪ್ರಕಾರ, ಏಪ್ರಿಲ್ 1 ರಿಂದ ಹೊಸ ಬೆಲೆ ಬಂದರೆ, ಜ್ವರ, ಸೋಂಕು, ಹೃದ್ರೋಗ, ಅಧಿಕ ರಕ್ತದೊತ್ತಡ, ಚರ್ಮ ರೋಗಗಳು ಮತ್ತು ರಕ್ತಹೀನತೆಯ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳು ದುಬಾರಿಯಾಗಬಹುದು ಎನ್ನಲಾಗಿದೆ.
ಪೋಸ್ಟ್ ಆಫೀಸ್ ಖಾತೆಗಳ ಬಡ್ಡಿ ಜಮೆ
ಏಪ್ರಿಲ್ 1, 2022ರಿಂದ ಪೋಸ್ಟ್ ಆಫೀಸ್ MIS, SCSC ಅಥವಾ ಟರ್ಮ್ ಠೇವಣಿ ಮೇಲಿನ ಬಡ್ಡಿಯನ್ನು ಉಳಿತಾಯ ಖಾತೆಗಳಿಗೆ ಜಮಾ ಮಾಡಲಾಗುವುದು. ಹಾಗಾಗಿ ಅಂತಹ ಖಾತೆದಾರರು ತಮ್ಮ ಅಂಚೆ ಕಚೇರಿಯ ಉಳಿತಾಯ ಖಾತೆಯನ್ನು ಈ ಖಾತೆಗಳೊಂದಿಗೆ ಜೋಡಣೆ ಮಾಡಬೇಕು ಎಂದು ಸೂಚಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/03/Capture-342.gif)