ಬಳ್ಳಾರಿ: ಜಿಂದಾಲ್ ಕಂಪನಿಯಲ್ಲಿ ಅವಘಡ: ನೀರಿನ ಹೊಂಡದಲ್ಲಿ ಬಿದ್ದು ಮೂವರ ಸಾವು

ಬಳ್ಳಾರಿ:

    ಪೈಪ್ ಲೈನ್ ಪರಿಶೀಲನೆ ಮಾಡುತ್ತಿದ್ದ ವೇಳೆ ನೀರಿನ ಹೊಂಡದಲ್ಲಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಇಲ್ಲಿನ ಜಿಂದಾಲ್ ಕಾರ್ಖಾನೆಯಲ್ಲಿ ನಡೆದಿದೆ.

     ಘಟನೆಯಲ್ಲಿ ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಸಾವನ್ನಪ್ಪಿದ್ದಾರೆ

     ಪೈಪ್‌ಲೈನ್ ಪರಿಶೀಲನೆ ಮಾಡುತ್ತಿದ್ದ ವೇಳೆ ನೀರು ರಭಸವಾಗಿ ಹರಿದಿದೆ. ನೀರಿನ ರಭಸಕ್ಕೆ ಸಿಕ್ಕಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ತೋರಣಗಲ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap