ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ : ಸಿ ಟಿ ರವಿ

ಧಾರವಾಡ

       ಟಿಪ್ಪು  ಸುಲ್ತಾನ್ನನ್ನು ಮಂಡ್ಯದ ಉರಿಗೌಡ, ನಂಜೇಗೌಡ ಕೊಂದಿರುವುದು ಎಂದು ಬಿಜೆಪಿ ಬಿಜೆಪಿ ನಾಯರು ವಾದಿಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮತ್ತೊಂದು ಹೊಸ ವಿಷಯವನ್ನು ತೇಲಿಬಿಟ್ಟಿದ್ದಾರೆ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್ ಎಂದು ಸಿಟಿ ರವಿ ಕುಹಕವಾಡಿದ್ದಾರೆ.

     ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಸಿಟಿ ರವಿ, ಉರಿಗೌಡ, ನಂಜೇಗೌಡ್ರು ಟಿಪುö್ಪನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸನಕ್ಕೆ ಇಟ್ಟ ಹೆಸರು ಕೈಮಾಬಾದ್, ಹಾಸನಕ್ಕೆ ಕೈಮಾಬಾತ್ ಎಂದು ಕರೆಯುವುದಕ್ಕೆ ಕುಮಾರಸ್ವಾಮಿಗೆ ಇಷ್ಟ ಇರಬಹುದು ಎಂದು ಟಾಂಗ್ ಕೊಟ್ಟರು. ಉರಿಗೌಡ ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಟಿಪುö್ಪವನ್ನ ಉರಿಗೌಡ ನಂಜೇಗೌಡ ಕೊಂದಿದ್ದು ಐತಿಹಾಸಿಕ ಸತ್ಯ. ಟಿಪ್ಪು ಹಾಸನವನ್ನು ಕೈಮಾಬಾದ್ ಎಂದು ಕರೆದಿದ್ದ. ಹೆಚ್.ಡಿ ಕುಮಾರಸ್ವಾಮಿಗೂ ಹಾಸನವನ್ನು ಕೈಮಾಬಾದ್ ಎಂದು ಕರೆಯಲು ಇಷ್ಟವೇನು?? ಎಂದು ವ್ಯಂಗ್ಯವಾಡಿದರು.

     ಟಿಪ್ಪು ಸಿದ್ದಾಂತ ಬದುಕಿದರೆ ಹಾಸನ ಕೈಮಾಬಾತ್ ಆಗುತ್ತದೆ. ಟಿಪ್ಪು ಬದುಕಿದ್ದರೇ ಯಾರ್ಯಾರ ಕತೆ ಏನಾಗುತ್ತಿತ್ತೋ ಏನೋ..? ಎಂದು ಸಿ.ಟಿ ರವಿ ಕುಹಕವಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap