ನವದೆಹಲಿ:
ಫೆಬ್ರುವರಿ 1ರಂದು ಬಜೆಟ್ ಮಂಡನೆ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘ಜೀವ ವಿಮಾ ಪಾಲಿಸಿಯ ಒಟ್ಟು ಪ್ರೀಮಿಯಂ ಮೊತ್ತವು ₹ 5 ಲಕ್ಷವನ್ನು ಮೀರಿದ್ದರೆ, ಒಟ್ಟು ಸಿಗುವ ಹಣಕ್ಕೆ ನೀಡುವ ತೆರಿಗೆ ವಿನಾಯಿತಿಯನ್ನು ಕೈಬಿಡಲಾಗುತ್ತದೆ’ ಎಂದು ಹೇಳಿದ್ದರು.
ಏಪ್ರಿಲ್ 1ರ ನಂತರದಲ್ಲಿ ಖರೀದಿಸುವ ಪಾಲಿಸಿಗಳಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಬಜೆಟ್ನಲ್ಲಿ ಹೇಳಲಾಗಿದೆ. ಆದರೆ ಈ ಪ್ರಸ್ತಾವನೆಯು ವಿಮಾ ಕಂಪನಿಗಳಲ್ಲಿ ಆತಂಕ ಮೂಡಿಸಿದೆ. ಪ್ರಮುಖ ವಿಮಾ ಕಂಪನಿಗಳ ಪ್ರತಿನಿಧಿಗಳು, ನಿರ್ಮಲಾ ಅವರನ್ನು ಮತ್ತು ಹಣಕಾಸು ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ, ಈ ಪ್ರಸ್ತಾವ ಮರುಪರಿಶೀಲಿಸುವಂತೆ ಮನವಿ ಮಾಡಿದ್ದರು.
ಅತಿ ಶ್ರೀಮಂತರ NIA ಮೇಲೆ ಮಾತ್ರ ಪರಿಣಾಮ ಬೀರುತ್ತದೆ. ಜನಸಾಮಾನ್ಯರಿಗೆ ಇದರಿಂದ ತೊಂದರೆ ಇಲ್ಲ. ಹೀಗಾಗಿ, ₹ 5 ಲಕ್ಷ ಎಂಬ ಮಿತಿಯನ್ನು ಸಡಿಲಿಸುವ ಸಾಧ್ಯತೆ ಇಲ್ಲ’ ಎಂದು ಅಧಿಕಾರಿಯೊಬ್ಬರು ಹೆಸರು ಬಹಿರಂಗಪಡಿಸಬಾರದು ಎಂಬ ಷರತ್ತಿನೊಂದಿಗೆ ತಿಳಿಸಿದ್ದಾರೆ.
ತೆರಿಗೆಯನ್ನು ಈ ರೀತಿಯಲ್ಲಿ ಲೆಕ್ಕ ಹಾಕಲು ಅವಕಾಶ ಕೊಡುವ ಬಗ್ಗೆ ಪ್ರಧಾನಿಯವರ ಕಚೇರಿಯು ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ. ಈ ವಿಚಾರವಾಗಿ ಹಣಕಾಸು ಸಚಿವಾಲಯದಿಂದ ಪ್ರತಿಕ್ರಿಯೆ ಸಿಕ್ಕಿಲ್ಲ. ‘ಇಂಡೆಕ್ಸೇಷನ್ ನೆಲೆಯಲ್ಲಿ ಲೆಕ್ಕ ಹಾಕಿದಾಗ ಪಾವತಿಸಬೇಕಿರುವ ತೆರಿಗೆ ಮೊತ್ತವು ಕಡಿಮೆ ಆಗುತ್ತದೆ’ ಎಂದು ತೆರಿಗೆ ಸಲಹೆಗಾರ ಕುಲದೀಪ್ ಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ