ಮಡಿಕೇರಿ
ಕರ್ನಾಟಕದ ಹೆಮ್ಮೆ ಎನ್ನಿಸಿರುವ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಅಂತರರಾಜ್ಯ ಗಡಿಯನ್ನು ಹೊಂದಿದೆ. ಈಗ ಇತರೆ ರಾಜ್ಯದ ವಾಹನಗಳು ನಾಗರಹೊಳೆ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶ ಪಡೆಯಲು ಅರಣ್ಯ ಇಲಾಖೆಯ ಚೆಕ್ಪೋಸ್ಟ್ನಲ್ಲಿ ಪ್ರವೇಶ ಶುಲ್ಕವನ್ನು ಪಾವತಿ ಮಾಡಬೇಕಿದೆ. ಅರಣ್ಯ ಇಲಾಖೆ ವಾಹನಗಳ ಶುಲ್ಕ ಸಂಗ್ರಹ ಪ್ರಕ್ರಿಯೆ ಆರಂಭಿಸಿದೆ.
ನಾಗರಹೊಳೆ ವನ್ಯಜೀವಿ ವಿಭಾಗದ ಎಸಿಎಫ್ ಗೋಪಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಂತರರಾಜ್ಯ ಗಡಿಗಳಲ್ಲಿ ಹೊರ ರಾಜ್ಯದ ವಾಹನಗಳಿಂದ ಪ್ರವೇಶ ಶುಲ್ಕವನ್ನು ಸಂಗ್ರಹ ಮಾಡುವ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಆರಂಭಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಲಘು ಮೋಟಾರ್ ವಾಹನಗಳು 20 ರೂ., ಭಾರೀ ವಾಹನಗಳಿಗೆ 50 ರೂ. ಪ್ರವೇಶ ದರವನ್ನು ನಿಗದಿ ಮಾಡಲಾಗಿದೆ. ವಾಹನಗಳಿಂದ ಸಂಗ್ರಹ ಮಾಡುವ ಪ್ರವೇಶ ಶುಲ್ಕದ ಹಣವನ್ನು ನಾಗರಹೊಳೆ ಅರಣ್ಯದ ಮೂಲಕ ಹಾದು ಹೋಗುವ ರಸ್ತೆಯ ಸ್ವಚ್ಛತೆಗೆ ಬಳಕೆ ಮಾಡಲು ನಿರ್ಧರಿಸಲಾಗಿದೆ. ಪ್ರವೇಶ ಶುಲ್ಕ ಸಂಗ್ರಹ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
